Categories: Uncategorized

‘ಬೇಗೂರು ಕಾಲೋನಿ’ಗೆ ಹೊರಟ ರಾಜೀವ್‍ ಹನು …

‘ಉಸಿರೇ ಉಸಿರೇ’ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು ನಟ ಮತ್ತು ‘ಬಿಗ್ ಬಾಸ್‍’ ಖ್ಯಾತಿಯ ರಾಜೀವ್‍ ಹನು. ಆದರೆ, ಚಿತ್ರ ತಡವಾಗಿ ಬಿಡುಗಡೆಯಾಗಿ, ಬಹಳ ಬೇಗನೆ ಮಾಯವಾಯಿತು. ಆ ನಂತರ ರಾಜೀವ್‍ ಮುಮದಿನ ಹೆಜ್ಜೆ ಏನು? ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಅದಕ್ಕೆ ಉತ್ತರ ಕೊಟ್ಟಿರುವ ರಾಜೀವ್‍, ಸದ್ದಿಲ್ಲದೆ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ.

ಇತ್ತೀಚೆಗೆ ರಾಜೀವ್‍ ಹನು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಅವರ ಹೊಸ ಚಿತ್ರದ ಘೋಷಣೆಯಾಗಿದೆ. ಚಿತ್ರಕ್ಕೆ ‘ಬೇಗೂರು ಕಾಲೋನಿ’ ಎಂದು ಹೆಸರಿಡಲಾಗಿದ್ದು, ಚಿತ್ರದ ಮೊದಲ ನಟ ಸಹ ಬಿಡುಗಡೆ ಮಾಡಲಾಗಿದೆ.

ಈ ಹಿಂದೆ ‘ರಾಜೀವ’ ಎಂಬ ಸಿನಿಮಾ ನಿರ್ದೇಶಿಸಿದ್ದ ‘ಫ್ಲೈಯಿಂಗ್ ಕಿಂಗ್’ ಮಂಜು ನಿರ್ದೇಶನದಲ್ಲಿ ‘ಬೇಗೂರು ಕಾಲೋನಿ’ ಚಿತ್ರವು ಮೂಡಿಬರುತ್ತಿದೆ. ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಮಂಜು, ಗಲ್ಲಿ ಶಿವ ಎಂಬ ಪ್ರಮುಖ ಪಾತ್ರದಲ್ಲೂ ಮಂಜು ನಟಿಸುತ್ತಿದ್ದಾರೆ. ಪಲ್ಲವಿ ಪರ್ವ ಮತ್ತು ಕೀರ್ತಿ ಭಂಡಾರಿ ನಾಯಕಿಯರಾಗಿ ಅಭಿನಯಿಸುತ್ತಿದ್ದು, ಪೋಸಾನಿ ಕೃಷ್ಣಮುರಳಿ, ರಾಜೀವ್ ಬೆಳವಾಡಿ, ಬಲ ರಾಜವಾಡಿ, ಸಯ್ಯದ್ ಸಲಾಂ, ಗಣೇಶ್ ನಾಯಕ್ ಮುಂತಾದವರು ನಟಿಸಿದ್ದಾರೆ.

‘ಬೇಗೂರು ಕಾಲೋನಿ’ ಚಿತ್ರದ ಚಿತ್ರೀಕರಣ ಸದ್ದಿಲ್‍ಲದೆ ಮುಗಿದಿದ್ದು, ಬೆಂಗಳೂರಿನ ಬೇಗೂರು, ಸರ್ಜಾಪುರ, ಅತ್ತಿಬೆಲೆ, ಬೊಮ್ಮನಹಳ್ಳಿ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಈ ಚಿತ್ರವನ್ನು ಶ್ರೀಮಾ ಸಿನಿಮಾಸ್ ಪ್ರೊಡಕ್ಷನ್ ನಡಿ ಶ್ರೀನಿವಾಸ್ ಬಾಬು ನಿರ್ಮಾಣ ಮಾಡುತ್ತಿದ್ದಾರೆ.

ಈ ಹಿಂದೆ ‘ಒನ್ಸ್ ಅಪಾನ್‍ ಎ ಟೈಮ್‍ ಇನ್‍ ಜಮಾಲಿಗುಡ್ಡ’, ‘ಜೆಸಿ’ ಮುಂತಾದ ಚಿತ್ರಗಳಿಗೆ ಛಾಯಾಗ್ರಹಣ ಮಾಡಿರುವ ಕಾರ್ತಿಕ್‍ ಈ ಚಿತ್ರದ ಛಾಯಾಗ್ರಹಕರು, ಅಭಿನಂದನ್‍ ಕಶ್ಯಪ್‍ ಸಂಗೀತ ಸಂಯೋಜಿಸಿದ್ದಾರೆ.

ಭೂಮಿಕಾ

Recent Posts

ಕಾರು-ಖಾಸಗಿ ಬಸ್‌ ಡಿಕ್ಕಿ : 6 ಮಂದಿ ಸಜೀವ ದಹನ

ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…

60 mins ago

ಕುಡಿಯಲು ಶುದ್ಧ ನೀರಿಲ್ಲದೆ ಆಲಗೂಡು ಗ್ರಾಮಸ್ಥರ ಪರದಾಟ

ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ವಿಎಫ್‌ಎಕ್ಸ್‌, ಗ್ರಾಫಿಕ್ಸ್‌ಗೆ ನೆರೆರಾಜ್ಯಗಳತ್ತ ಐಟಿ ನಗರದ ಸಿನಿಮಂದಿ

ವೈಡ್‌ ಆಂಗಲ್‌ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ…

2 hours ago

ಓದುಗರ ಪತ್ರ | ಅನಗತ್ಯ ದೂರವಾಣಿ ಕರೆ ಕಿರಿಕಿರಿ ತಪ್ಪಿಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ…

2 hours ago

ಓದುಗರ ಪತ್ರ | ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಕಲ್ಪಿಸಿ

ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ…

3 hours ago

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…

3 hours ago