Categories: Uncategorized

‘ಬೇಗೂರು ಕಾಲೋನಿ’ಗೆ ಹೊರಟ ರಾಜೀವ್‍ ಹನು …

‘ಉಸಿರೇ ಉಸಿರೇ’ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು ನಟ ಮತ್ತು ‘ಬಿಗ್ ಬಾಸ್‍’ ಖ್ಯಾತಿಯ ರಾಜೀವ್‍ ಹನು. ಆದರೆ, ಚಿತ್ರ ತಡವಾಗಿ ಬಿಡುಗಡೆಯಾಗಿ, ಬಹಳ ಬೇಗನೆ ಮಾಯವಾಯಿತು. ಆ ನಂತರ ರಾಜೀವ್‍ ಮುಮದಿನ ಹೆಜ್ಜೆ ಏನು? ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಅದಕ್ಕೆ ಉತ್ತರ ಕೊಟ್ಟಿರುವ ರಾಜೀವ್‍, ಸದ್ದಿಲ್ಲದೆ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ.

ಇತ್ತೀಚೆಗೆ ರಾಜೀವ್‍ ಹನು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಅವರ ಹೊಸ ಚಿತ್ರದ ಘೋಷಣೆಯಾಗಿದೆ. ಚಿತ್ರಕ್ಕೆ ‘ಬೇಗೂರು ಕಾಲೋನಿ’ ಎಂದು ಹೆಸರಿಡಲಾಗಿದ್ದು, ಚಿತ್ರದ ಮೊದಲ ನಟ ಸಹ ಬಿಡುಗಡೆ ಮಾಡಲಾಗಿದೆ.

ಈ ಹಿಂದೆ ‘ರಾಜೀವ’ ಎಂಬ ಸಿನಿಮಾ ನಿರ್ದೇಶಿಸಿದ್ದ ‘ಫ್ಲೈಯಿಂಗ್ ಕಿಂಗ್’ ಮಂಜು ನಿರ್ದೇಶನದಲ್ಲಿ ‘ಬೇಗೂರು ಕಾಲೋನಿ’ ಚಿತ್ರವು ಮೂಡಿಬರುತ್ತಿದೆ. ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಮಂಜು, ಗಲ್ಲಿ ಶಿವ ಎಂಬ ಪ್ರಮುಖ ಪಾತ್ರದಲ್ಲೂ ಮಂಜು ನಟಿಸುತ್ತಿದ್ದಾರೆ. ಪಲ್ಲವಿ ಪರ್ವ ಮತ್ತು ಕೀರ್ತಿ ಭಂಡಾರಿ ನಾಯಕಿಯರಾಗಿ ಅಭಿನಯಿಸುತ್ತಿದ್ದು, ಪೋಸಾನಿ ಕೃಷ್ಣಮುರಳಿ, ರಾಜೀವ್ ಬೆಳವಾಡಿ, ಬಲ ರಾಜವಾಡಿ, ಸಯ್ಯದ್ ಸಲಾಂ, ಗಣೇಶ್ ನಾಯಕ್ ಮುಂತಾದವರು ನಟಿಸಿದ್ದಾರೆ.

‘ಬೇಗೂರು ಕಾಲೋನಿ’ ಚಿತ್ರದ ಚಿತ್ರೀಕರಣ ಸದ್ದಿಲ್‍ಲದೆ ಮುಗಿದಿದ್ದು, ಬೆಂಗಳೂರಿನ ಬೇಗೂರು, ಸರ್ಜಾಪುರ, ಅತ್ತಿಬೆಲೆ, ಬೊಮ್ಮನಹಳ್ಳಿ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಈ ಚಿತ್ರವನ್ನು ಶ್ರೀಮಾ ಸಿನಿಮಾಸ್ ಪ್ರೊಡಕ್ಷನ್ ನಡಿ ಶ್ರೀನಿವಾಸ್ ಬಾಬು ನಿರ್ಮಾಣ ಮಾಡುತ್ತಿದ್ದಾರೆ.

ಈ ಹಿಂದೆ ‘ಒನ್ಸ್ ಅಪಾನ್‍ ಎ ಟೈಮ್‍ ಇನ್‍ ಜಮಾಲಿಗುಡ್ಡ’, ‘ಜೆಸಿ’ ಮುಂತಾದ ಚಿತ್ರಗಳಿಗೆ ಛಾಯಾಗ್ರಹಣ ಮಾಡಿರುವ ಕಾರ್ತಿಕ್‍ ಈ ಚಿತ್ರದ ಛಾಯಾಗ್ರಹಕರು, ಅಭಿನಂದನ್‍ ಕಶ್ಯಪ್‍ ಸಂಗೀತ ಸಂಯೋಜಿಸಿದ್ದಾರೆ.

ಭೂಮಿಕಾ

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

15 mins ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

3 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

8 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

8 hours ago