ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ ಎಂದು ಶ್ರೀರಂಗಪಟ್ಟಣ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಹೇಳಿದ್ದಾರೆ.
ಶನಿವಾರ ಶ್ರೀರಂಗಪಟ್ಟಣದ ಬಿಜಿಎಸ್ ಶಾಲೆ ಅವರಣದಲ್ಲಿ ನೂತನ ಆದಿಚುಂಚನಗಿರಿ ಬಾಲ ಜಗತ್ ಆಂಗ್ಲ ಮಾಧ್ಯಮ, ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಹಾಗೂ ಗಣಪತಿ ದೇವಾಲಯದ ಕಟ್ಟಡಗಳ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡುವಾಗ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ್ದ ಬಗ್ಗೆ ಎಲ್ಲೆಡೆ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಖಂಡನೆ ಕೂಡ ವ್ಯಕ್ತವಾಗಿತ್ತು. ತಾವು ನೀಡಿದ್ದ ಹೇಳಿಕೆ ಕುರಿತು ಶಾಸಕ ಎ.ಬಿ. ರಮೇಶ್ಬಾಬು ಬಂಡಿಸಿದ್ದೇಗೌಡ ಭಾನುವಾರ ಕ್ಷಮೆಯಾಚಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಬಾಬು ಅವರು, ನಾನು ನಾನು ಮಠ ಸರಿ ಇಲ್ಲ ಎಂದು ಹೇಳಿಲ್ಲ. ಹಿಂದೆ ಇದ್ದ ಶ್ರೀ ಬಾಲಗಂಗಾಧರನಾಥ ಶ್ರೀಗಳು ಎಲ್ಲರನ್ನೂ ವಿಶ್ವಾಸಕ್ಕೆ ತೆಗಡದುಕೊಂಡು ಹೋಗುತ್ತಿದ್ದರು. ಅವರು ಕಟ್ಟಿ ಬೆಳೆಸಿದ ಚುಂಚನಗಿರಿ ಮಠ ನಂತರವೂ ಚೆನ್ನಾಗಿ ನಡೆದುಕೊಂಡು ಹೋಗಬೇಕು ಎಂಬ ಭಾವನೆಯಲ್ಲಿ ನಾನು ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದರು.
ಈಗಿನ ಪೀಠಾಧ್ಯಕ್ಷರಾದ ಶ್ರೀ ನಿರ್ಮಾಲನಂದನಾಥಸ್ವಾಮೀಜಿ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಮಾತನಾಡುವ ಸಂದರ್ಭದಲ್ಲಿ ಸಣ್ಣ ಪದ ವ್ಯತ್ಯಾಸ ಆಗುತ್ತೆ. ಒಕ್ಕಲಿಗರ ಸಂಘದ ಅನೇಕರು ನನ್ನ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ. ಅವರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ನಿರ್ಮಲಾನಂದನಾಥಸ್ವಾಮೀಜಿ ಅವರ ಮನಸ್ಸಿಗೆ ನೋವಾಗುವ ರೀತಿ ನಡೆದುಕೊಂಡಿಲ್ಲ. ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.
ಇದನ್ನು ಮುಂದುವರಿಸಿಕೊಂಡು ಹೋಗುವುದು ಬೇಡ, ಇಲ್ಲಿಗೆ ಬಿಡಿ. ಕೆಟ್ಟ ಯೋಚನೆಯಲ್ಲಿ ನಾನು ಮಾತನಾಡಿಲ್ಲ. ಮಾತಿನ ಭರದಲ್ಲಿ ಈ ರೀತಿ ಆಗಿದೆ ಅಷ್ಟೇ ಎಂದು ಹೇಳಿದರು.
ನಾನು ಮಠದ ಸದ್ಭಕ್ತನಾಗಿದ್ದು, ಯಾರೂ ಕೂಡ ಅನ್ಯತಾ ಭಾವಿಸಬಾರದು ಎಂದು ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು.
ನಮ್ಮ ಮಠ ಎಲ್ಲರ ಪರವಾಗಿ ಇರಬೇಕು. ಎಲ್ಲರನ್ನೂ ಒಂದೇ ಸದ್ಭಾವನೆಯಲ್ಲಿ ಕಾಣಬೇಕು. ನನ್ನ ಮಾತನ್ನು ನನ್ನ ಸ್ನೇಹಿತರು ತಿರುಚುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅದು ಯಾರು ಎಂಬುದು ಗೊತ್ತಾಗುತ್ತದೆ ಎಂದರು.
ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ನೀಡಿದ್ದ ಹೇಳಿಕೆಯ ಬಗ್ಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀವ್ರಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ತಾವೂ ಕೂಡ ಹಿಂದೆ ತಾವೇ ಆಡಿದ್ದ ಮಾತಿಗೆ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರ ಸಲಹೆಯಂತೆ ಶ್ರೀಗಳ ಕ್ಷಮೆಯಾಚಿಸಿದ್ದೆ ಎಂದು ನೆನಪಿಸಿಕೊಂಡರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…