ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಜನರು ಬರುತ್ತಾರೆ. ಆದರೆ ಚಾಮುಂಡೇಶ್ವರಿ ದೇವಾಲಯದ ಬಳಿ ಇರುವ ಚಪ್ಪಲಿ ಸ್ಟ್ಯಾಂಡ್ನಲ್ಲಿ ಚಪ್ಪಲಿ ಬಿಟ್ಟ ಮೇಲೆ ಕೈ ತೊಳೆಯಲು ನೀರು ಒದಗಿಸದೇ ಇರುವುದರಿಂದ ಭಕ್ತಾದಿಗಳು ಚಪ್ಪಲಿ ಮುಟ್ಟಿದ ಕೈಯಲ್ಲಿಯೇ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯುವುದು ಅನಿವಾರ್ಯವಾಗಿದೆ.
ದೇವಿಗೆ ನೈವೇದ್ಯ ಮಾಡಿಸಲು ಹಣ್ಣು, ಕಾಯಿ ಖರೀದಿಸುವವರಿಗೆ ವ್ಯಾಪಾರಿಗಳು ಬಾಟಲಿಯಲ್ಲಿ ಕೈಗೆ ನೀರು ಸಿಂಪಡಿಸುತ್ತಾರೆ. ಆದರೆ ಹಣ್ಣು ಕಾಯಿ ಖರೀದಿಸದೇ ಇರುವವರು ಅನಿವಾರ್ಯವಾಗಿ ಪಕ್ಕದ ಅಂಗಡಿಯಲ್ಲಿ ನೀರಿನ ಬಾಟಲಿ ತೆಗೆದುಕೊಂಡು ಕೈ ತೊಳೆದುಕೊಂಡು ದೇವರ ದರ್ಶನ ಮಾಡಬೇಕಾಗಿದೆ. ನೀರಿನ ಬಾಟಲಿ ಖರೀದಿಸಲು ಕನಿಷ್ಠ ೨೦ ರೂ.ಗಳನ್ನು ನೀಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಚಪ್ಪಲಿ ಸ್ಟಾ ಂಡ್ ಬಳಿ ಭಕ್ತರಿಗೆ ಕೈತೊಳೆಯಲು ನೀರಿನ ವ್ಯವಸ್ಥೆ ಮಾಡುವ ಮೂಲಕ ಅನುಕೂಲ ಕಲ್ಪಿಸಬೇಕಾಗಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…