ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಜನರು ಬರುತ್ತಾರೆ. ಆದರೆ ಚಾಮುಂಡೇಶ್ವರಿ ದೇವಾಲಯದ ಬಳಿ ಇರುವ ಚಪ್ಪಲಿ ಸ್ಟ್ಯಾಂಡ್ನಲ್ಲಿ ಚಪ್ಪಲಿ ಬಿಟ್ಟ ಮೇಲೆ ಕೈ ತೊಳೆಯಲು ನೀರು ಒದಗಿಸದೇ ಇರುವುದರಿಂದ ಭಕ್ತಾದಿಗಳು ಚಪ್ಪಲಿ ಮುಟ್ಟಿದ ಕೈಯಲ್ಲಿಯೇ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯುವುದು ಅನಿವಾರ್ಯವಾಗಿದೆ.
ದೇವಿಗೆ ನೈವೇದ್ಯ ಮಾಡಿಸಲು ಹಣ್ಣು, ಕಾಯಿ ಖರೀದಿಸುವವರಿಗೆ ವ್ಯಾಪಾರಿಗಳು ಬಾಟಲಿಯಲ್ಲಿ ಕೈಗೆ ನೀರು ಸಿಂಪಡಿಸುತ್ತಾರೆ. ಆದರೆ ಹಣ್ಣು ಕಾಯಿ ಖರೀದಿಸದೇ ಇರುವವರು ಅನಿವಾರ್ಯವಾಗಿ ಪಕ್ಕದ ಅಂಗಡಿಯಲ್ಲಿ ನೀರಿನ ಬಾಟಲಿ ತೆಗೆದುಕೊಂಡು ಕೈ ತೊಳೆದುಕೊಂಡು ದೇವರ ದರ್ಶನ ಮಾಡಬೇಕಾಗಿದೆ. ನೀರಿನ ಬಾಟಲಿ ಖರೀದಿಸಲು ಕನಿಷ್ಠ ೨೦ ರೂ.ಗಳನ್ನು ನೀಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಚಪ್ಪಲಿ ಸ್ಟಾ ಂಡ್ ಬಳಿ ಭಕ್ತರಿಗೆ ಕೈತೊಳೆಯಲು ನೀರಿನ ವ್ಯವಸ್ಥೆ ಮಾಡುವ ಮೂಲಕ ಅನುಕೂಲ ಕಲ್ಪಿಸಬೇಕಾಗಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…