ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಂಭಾಗದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆವತಿಯಿಂದ ತಾಲ್ಲೂಕು ಪಂಚಾಯಿತಿಯ ಅನಿರ್ಬಂಧಿತ ಅನುದಾನದಡಿ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ ಈ ಬಸ್ ತಂಗುದಾಣವನ್ನು ನಿರ್ಮಿಸಿ ಕೆಲವು ತಿಂಗಳುಗಳಷ್ಟೇ ಕಳೆದಿದ್ದು, ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಸಾರ್ವಜನಿಕರ ಉಪಯೋಗದಿಂದ ದೂರಾಗಿದೆ.
ಈ ನಿಲ್ದಾಣದ ಸಮೀಪದಲ್ಲಿಯೇ ಸರ್ಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಮಹದೇಶ್ವರಸ್ವಾಮಿ ದೇವಸ್ಥಾನವಿದ್ದು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ದೇವಾಲಯಕ್ಕೆ ಬರುವ ಭಕ್ತರು ಇದೇ ಬಸ್ ತಂಗುದಾಣದಲ್ಲಿ ನಿಂತು ಬಸ್ಗಾಗಿ ಕಾಯುತ್ತಾರೆ. ಆದರೆ, ಈ ಬಸ್ ನಿಲ್ದಾಣದ ಸುತ್ತ ಗಿಡಗಂಟೆ ಬೆಳೆದುಕೊಂಡಿದ್ದು, ವಿಷಜಂತುಗಳ ಆತಂಕದಿಂದಾಗಿ ಯಾರೂ ಈ ನಿಲ್ದಾಣದೊಳಗೆ ಹೋಗಲು ಸಾಧ್ಯ ವಾಗುತ್ತಿಲ್ಲ. ಇದರೊಂದಿಗೆ ಕೆಲ ಸರ್ಕಾರಿ ಬಸ್ಗಳವರು ಈ ನಿಲ್ದಾಣದ ಸಮೀಪ ಶಿಕ್ಷಕರು, ವಿದ್ಯಾರ್ಥಿಗಳು ನಿಂತಿದ್ದರೂ ನಿಲುಗಡೆ ನೀಡದೆ ಹೋಗುತ್ತಿದ್ದಾರೆ. ಬಸ್ಗಳೇ ನಿಲುಗಡೆ ನೀಡದ ಮೇಲೆ ಬಸ್ ತಂಗುದಾಣವನ್ನು ನಿರ್ಮಿಸಿದರೆ ಫಲವೇನು? ಕೂಡಲೇ ಈ ಬಗ್ಗೆ ಸಂಬಂಧಪಟ್ಟವರು ಕ್ರಮವಹಿಸಿ ಬಸ್ ತಂಗುದಾಣದ ಸುತ್ತ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸುವ ಜತೆಗೆ ಬಸ್ಗಳು ನಿಲುಗಡೆ ನೀಡುವಂತೆ ಸೂಚನೆ ನೀಡಬೇಕಿದೆ.
-ಪ್ರಶಾಂತ್, ಅಂತರಸಂತೆ, ಎಚ್.ಡಿ.ಕೋಟೆ ತಾ
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…
• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…
ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…