Categories: Uncategorized

ಓದುಗರ ಪತ್ರ | ಬಸ್ ತಂಗುದಾಣದ ಸುತ್ತಲಿನ ಗಿಡಗಂಟಿ ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಂಭಾಗದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆವತಿಯಿಂದ ತಾಲ್ಲೂಕು ಪಂಚಾಯಿತಿಯ ಅನಿರ್ಬಂಧಿತ ಅನುದಾನದಡಿ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ ಈ ಬಸ್ ತಂಗುದಾಣವನ್ನು ನಿರ್ಮಿಸಿ ಕೆಲವು ತಿಂಗಳುಗಳಷ್ಟೇ ಕಳೆದಿದ್ದು, ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಸಾರ್ವಜನಿಕರ ಉಪಯೋಗದಿಂದ ದೂರಾಗಿದೆ.

ಈ ನಿಲ್ದಾಣದ ಸಮೀಪದಲ್ಲಿಯೇ ಸರ್ಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಮಹದೇಶ್ವರಸ್ವಾಮಿ ದೇವಸ್ಥಾನವಿದ್ದು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ದೇವಾಲಯಕ್ಕೆ ಬರುವ ಭಕ್ತರು ಇದೇ ಬಸ್ ತಂಗುದಾಣದಲ್ಲಿ ನಿಂತು ಬಸ್‌ಗಾಗಿ ಕಾಯುತ್ತಾರೆ. ಆದರೆ, ಈ ಬಸ್ ನಿಲ್ದಾಣದ ಸುತ್ತ ಗಿಡಗಂಟೆ ಬೆಳೆದುಕೊಂಡಿದ್ದು, ವಿಷಜಂತುಗಳ ಆತಂಕದಿಂದಾಗಿ ಯಾರೂ ಈ ನಿಲ್ದಾಣದೊಳಗೆ ಹೋಗಲು ಸಾಧ್ಯ ವಾಗುತ್ತಿಲ್ಲ. ಇದರೊಂದಿಗೆ ಕೆಲ ಸರ್ಕಾರಿ ಬಸ್‌ಗಳವರು ಈ ನಿಲ್ದಾಣದ ಸಮೀಪ ಶಿಕ್ಷಕರು, ವಿದ್ಯಾರ್ಥಿಗಳು ನಿಂತಿದ್ದರೂ ನಿಲುಗಡೆ ನೀಡದೆ ಹೋಗುತ್ತಿದ್ದಾರೆ. ಬಸ್‌ಗಳೇ ನಿಲುಗಡೆ ನೀಡದ ಮೇಲೆ ಬಸ್ ತಂಗುದಾಣವನ್ನು ನಿರ್ಮಿಸಿದರೆ ಫಲವೇನು? ಕೂಡಲೇ ಈ ಬಗ್ಗೆ ಸಂಬಂಧಪಟ್ಟವರು ಕ್ರಮವಹಿಸಿ ಬಸ್ ತಂಗುದಾಣದ ಸುತ್ತ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸುವ ಜತೆಗೆ ಬಸ್‌ಗಳು ನಿಲುಗಡೆ ನೀಡುವಂತೆ ಸೂಚನೆ ನೀಡಬೇಕಿದೆ.

-ಪ್ರಶಾಂತ್‌, ಅಂತರಸಂತೆ, ಎಚ್.ಡಿ.ಕೋಟೆ ತಾ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

6 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

6 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

6 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

6 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

6 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

6 hours ago