ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಂಭಾಗದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆವತಿಯಿಂದ ತಾಲ್ಲೂಕು ಪಂಚಾಯಿತಿಯ ಅನಿರ್ಬಂಧಿತ ಅನುದಾನದಡಿ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ ಈ ಬಸ್ ತಂಗುದಾಣವನ್ನು ನಿರ್ಮಿಸಿ ಕೆಲವು ತಿಂಗಳುಗಳಷ್ಟೇ ಕಳೆದಿದ್ದು, ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಸಾರ್ವಜನಿಕರ ಉಪಯೋಗದಿಂದ ದೂರಾಗಿದೆ.
ಈ ನಿಲ್ದಾಣದ ಸಮೀಪದಲ್ಲಿಯೇ ಸರ್ಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಮಹದೇಶ್ವರಸ್ವಾಮಿ ದೇವಸ್ಥಾನವಿದ್ದು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ದೇವಾಲಯಕ್ಕೆ ಬರುವ ಭಕ್ತರು ಇದೇ ಬಸ್ ತಂಗುದಾಣದಲ್ಲಿ ನಿಂತು ಬಸ್ಗಾಗಿ ಕಾಯುತ್ತಾರೆ. ಆದರೆ, ಈ ಬಸ್ ನಿಲ್ದಾಣದ ಸುತ್ತ ಗಿಡಗಂಟೆ ಬೆಳೆದುಕೊಂಡಿದ್ದು, ವಿಷಜಂತುಗಳ ಆತಂಕದಿಂದಾಗಿ ಯಾರೂ ಈ ನಿಲ್ದಾಣದೊಳಗೆ ಹೋಗಲು ಸಾಧ್ಯ ವಾಗುತ್ತಿಲ್ಲ. ಇದರೊಂದಿಗೆ ಕೆಲ ಸರ್ಕಾರಿ ಬಸ್ಗಳವರು ಈ ನಿಲ್ದಾಣದ ಸಮೀಪ ಶಿಕ್ಷಕರು, ವಿದ್ಯಾರ್ಥಿಗಳು ನಿಂತಿದ್ದರೂ ನಿಲುಗಡೆ ನೀಡದೆ ಹೋಗುತ್ತಿದ್ದಾರೆ. ಬಸ್ಗಳೇ ನಿಲುಗಡೆ ನೀಡದ ಮೇಲೆ ಬಸ್ ತಂಗುದಾಣವನ್ನು ನಿರ್ಮಿಸಿದರೆ ಫಲವೇನು? ಕೂಡಲೇ ಈ ಬಗ್ಗೆ ಸಂಬಂಧಪಟ್ಟವರು ಕ್ರಮವಹಿಸಿ ಬಸ್ ತಂಗುದಾಣದ ಸುತ್ತ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸುವ ಜತೆಗೆ ಬಸ್ಗಳು ನಿಲುಗಡೆ ನೀಡುವಂತೆ ಸೂಚನೆ ನೀಡಬೇಕಿದೆ.
-ಪ್ರಶಾಂತ್, ಅಂತರಸಂತೆ, ಎಚ್.ಡಿ.ಕೋಟೆ ತಾ
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…