ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಂಭಾಗದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆವತಿಯಿಂದ ತಾಲ್ಲೂಕು ಪಂಚಾಯಿತಿಯ ಅನಿರ್ಬಂಧಿತ ಅನುದಾನದಡಿ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ ಈ ಬಸ್ ತಂಗುದಾಣವನ್ನು ನಿರ್ಮಿಸಿ ಕೆಲವು ತಿಂಗಳುಗಳಷ್ಟೇ ಕಳೆದಿದ್ದು, ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಸಾರ್ವಜನಿಕರ ಉಪಯೋಗದಿಂದ ದೂರಾಗಿದೆ.
ಈ ನಿಲ್ದಾಣದ ಸಮೀಪದಲ್ಲಿಯೇ ಸರ್ಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಮಹದೇಶ್ವರಸ್ವಾಮಿ ದೇವಸ್ಥಾನವಿದ್ದು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ದೇವಾಲಯಕ್ಕೆ ಬರುವ ಭಕ್ತರು ಇದೇ ಬಸ್ ತಂಗುದಾಣದಲ್ಲಿ ನಿಂತು ಬಸ್ಗಾಗಿ ಕಾಯುತ್ತಾರೆ. ಆದರೆ, ಈ ಬಸ್ ನಿಲ್ದಾಣದ ಸುತ್ತ ಗಿಡಗಂಟೆ ಬೆಳೆದುಕೊಂಡಿದ್ದು, ವಿಷಜಂತುಗಳ ಆತಂಕದಿಂದಾಗಿ ಯಾರೂ ಈ ನಿಲ್ದಾಣದೊಳಗೆ ಹೋಗಲು ಸಾಧ್ಯ ವಾಗುತ್ತಿಲ್ಲ. ಇದರೊಂದಿಗೆ ಕೆಲ ಸರ್ಕಾರಿ ಬಸ್ಗಳವರು ಈ ನಿಲ್ದಾಣದ ಸಮೀಪ ಶಿಕ್ಷಕರು, ವಿದ್ಯಾರ್ಥಿಗಳು ನಿಂತಿದ್ದರೂ ನಿಲುಗಡೆ ನೀಡದೆ ಹೋಗುತ್ತಿದ್ದಾರೆ. ಬಸ್ಗಳೇ ನಿಲುಗಡೆ ನೀಡದ ಮೇಲೆ ಬಸ್ ತಂಗುದಾಣವನ್ನು ನಿರ್ಮಿಸಿದರೆ ಫಲವೇನು? ಕೂಡಲೇ ಈ ಬಗ್ಗೆ ಸಂಬಂಧಪಟ್ಟವರು ಕ್ರಮವಹಿಸಿ ಬಸ್ ತಂಗುದಾಣದ ಸುತ್ತ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸುವ ಜತೆಗೆ ಬಸ್ಗಳು ನಿಲುಗಡೆ ನೀಡುವಂತೆ ಸೂಚನೆ ನೀಡಬೇಕಿದೆ.
-ಪ್ರಶಾಂತ್, ಅಂತರಸಂತೆ, ಎಚ್.ಡಿ.ಕೋಟೆ ತಾ
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…