Categories: Uncategorized

ಓದುಗರ ಪತ್ರ | ಅನುತ್ತೀರ್ಣಗೊಳಿಸುವುದು ಸರಿಯಾದ ನಿರ್ಧಾರವಲ್ಲ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಕೇಂದ್ರ ಶಿಕ್ಷಣ ಸಚಿವಾಲಯದ ಅಧೀನಕ್ಕೆ ಒಳಪಡುವ ಶಾಲೆಗಳಲ್ಲಿ ೫ನೇ ಮತ್ತು ೮ನೇ ತರಗತಿಗಳಲ್ಲಿ ಕಲಿಕಾ ಸಾಮರ್ಥ್ಯ ಇಲ್ಲದ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂಬುದಾಗಿ ವರದಿಯಾಗಿದೆ. ಸರ್ಕಾರದ ಈ ನಿರ್ಧಾರ ಕಲಿಕಾ ಹಂತದಲ್ಲಿರುವ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿ ಗಳಲ್ಲಿ ಕೀಳರಿಮೆಯ ಭಾವನೆ ಮೂಡಿ, ಅನುತ್ತೀರ್ಣಗೊಂಡಿದ್ದೇವೆ ಎಂದು ಆ ಮಕ್ಕಳು ಅನಾಹುತವನ್ನೂ ಮೈಮೇಲೆ ಎಳೆದುಕೊಳ್ಳಬಹುದು. ಇಲ್ಲವೇ ಅವರ ಪೋಷಕರು ಶಾಲೆ ಬಿಡಿಸಿ ವ್ಯವಸಾಯಕ್ಕೋ ಅಥವಾ ಇನ್ನಿತರ ಕೆಲಸಗಳಿಗೋ ಸೇರಿಸಬಹುದು. ಒಂದು ವೇಳೆ ಹೆಣ್ಣು ಮಕ್ಕಳು ಅನುತ್ತೀರ್ಣ ಗೊಂಡರಂತೂ ಅವರನ್ನು ಮದುವೆ ಮಾಡಿಬಿಡುತ್ತಾರೆ. ಇದರಿಂದಾಗಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗಲು ಸರ್ಕಾರವೇ ಪರೋಕ್ಷವಾಗಿ ಕಾರಣವಾದಂತಾಗುತ್ತದೆ.

ಕಲಿಕಾ ಸಾಮರ್ಥ್ಯ ಕಡಿಮೆ ಇರುವ ಮಕ್ಕಳನ್ನು ಅನುತ್ತೀರ್ಣಗೊಳಿಸುವ ಬದಲು ಆ ಮಕ್ಕಳಿಗೆ ವಿಶೇಷ ತರಗತಿಗಳನ್ನು ಮಾಡಿ ಅವರ ಕಲಿಕಾ ಮಟ್ಟವನ್ನು ಹೆಚ್ಚಿಸಬೇಕು. ಅವರು ಯಾವ ವಿಷಯಗಳಲ್ಲಿ ಹಿಂದುಳಿದಿದ್ದಾರೆ ಆ ವಿಷಯಗಳ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಮಾಡಬೇಕು. ಅದನ್ನು ಬಿಟ್ಟು ಆ ಮಕ್ಕಳನ್ನು ಅನುತ್ತೀರ್ಣ ಮಾಡುವುದರಿಂದ ಮಕ್ಕಳು ಹಾದಿ ತಪ್ಪುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಈ ನಿರ್ಧಾರವನ್ನು ಕೈಬಿಡಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago