Categories: Uncategorized

ಓದುಗರ ಪತ್ರ | ಅನುತ್ತೀರ್ಣಗೊಳಿಸುವುದು ಸರಿಯಾದ ನಿರ್ಧಾರವಲ್ಲ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಕೇಂದ್ರ ಶಿಕ್ಷಣ ಸಚಿವಾಲಯದ ಅಧೀನಕ್ಕೆ ಒಳಪಡುವ ಶಾಲೆಗಳಲ್ಲಿ ೫ನೇ ಮತ್ತು ೮ನೇ ತರಗತಿಗಳಲ್ಲಿ ಕಲಿಕಾ ಸಾಮರ್ಥ್ಯ ಇಲ್ಲದ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂಬುದಾಗಿ ವರದಿಯಾಗಿದೆ. ಸರ್ಕಾರದ ಈ ನಿರ್ಧಾರ ಕಲಿಕಾ ಹಂತದಲ್ಲಿರುವ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿ ಗಳಲ್ಲಿ ಕೀಳರಿಮೆಯ ಭಾವನೆ ಮೂಡಿ, ಅನುತ್ತೀರ್ಣಗೊಂಡಿದ್ದೇವೆ ಎಂದು ಆ ಮಕ್ಕಳು ಅನಾಹುತವನ್ನೂ ಮೈಮೇಲೆ ಎಳೆದುಕೊಳ್ಳಬಹುದು. ಇಲ್ಲವೇ ಅವರ ಪೋಷಕರು ಶಾಲೆ ಬಿಡಿಸಿ ವ್ಯವಸಾಯಕ್ಕೋ ಅಥವಾ ಇನ್ನಿತರ ಕೆಲಸಗಳಿಗೋ ಸೇರಿಸಬಹುದು. ಒಂದು ವೇಳೆ ಹೆಣ್ಣು ಮಕ್ಕಳು ಅನುತ್ತೀರ್ಣ ಗೊಂಡರಂತೂ ಅವರನ್ನು ಮದುವೆ ಮಾಡಿಬಿಡುತ್ತಾರೆ. ಇದರಿಂದಾಗಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗಲು ಸರ್ಕಾರವೇ ಪರೋಕ್ಷವಾಗಿ ಕಾರಣವಾದಂತಾಗುತ್ತದೆ.

ಕಲಿಕಾ ಸಾಮರ್ಥ್ಯ ಕಡಿಮೆ ಇರುವ ಮಕ್ಕಳನ್ನು ಅನುತ್ತೀರ್ಣಗೊಳಿಸುವ ಬದಲು ಆ ಮಕ್ಕಳಿಗೆ ವಿಶೇಷ ತರಗತಿಗಳನ್ನು ಮಾಡಿ ಅವರ ಕಲಿಕಾ ಮಟ್ಟವನ್ನು ಹೆಚ್ಚಿಸಬೇಕು. ಅವರು ಯಾವ ವಿಷಯಗಳಲ್ಲಿ ಹಿಂದುಳಿದಿದ್ದಾರೆ ಆ ವಿಷಯಗಳ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಮಾಡಬೇಕು. ಅದನ್ನು ಬಿಟ್ಟು ಆ ಮಕ್ಕಳನ್ನು ಅನುತ್ತೀರ್ಣ ಮಾಡುವುದರಿಂದ ಮಕ್ಕಳು ಹಾದಿ ತಪ್ಪುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಈ ನಿರ್ಧಾರವನ್ನು ಕೈಬಿಡಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago