Categories: Uncategorized

ಓದುಗರ ಪತ್ರ| ಪರಿಸರ ಸ್ನೇಹಿ ಗಣಪತಿ ಪೂಜಿಸೋಣ

ದೇಶದಲ್ಲಿ ವಿಜೃಂಭಣೆಯಿಂದ ಆಚರಿಸುವ ಹಬ್ಬಗಳಲ್ಲಿ ಗಣೇಶನ ಹಬ್ಬ ಪ್ರಮುಖವಾದದ್ದು. ಎಲ್ಲ ಜನರೂ ಒಗ್ಗಟ್ಟಿನಿಂದ ಗಣೇಶನ ಮೂರ್ತಿಗಳನ್ನು ಕೂರಿಸಿ, ಪೂಜಿಸುವ ಹಬ್ಬ ಇದು.

ಇನ್ನೇನು ಕೆಲ ದಿನಗಳಲ್ಲಿ ಗಣೇಶ ಹಬ್ಬ ಬರಲಿದ್ದು, ಎಲ್ಲ ಗ್ರಾಮಗಳಲ್ಲಿಯೂ ಭರದಿಂದ ತಯಾರಿ ನಡೆಸಲಾಗುತ್ತಿದೆ. ಹಬ್ಬದ ದಿನ ಸಮೀಪವಾಗುತ್ತಿದ್ದಂತೆಯೇ ಬಣ್ಣ ಬಣ್ಣದ ಗಣಪನ ವಿಗ್ರಹಗಳು ಮಾರುಕಟ್ಟೆಗೆ ಬರುತ್ತವೆ. ಇವುಗಳಲ್ಲಿ ಬಹುಪಾಲು ರಾಸಾಯನಿಕ ಮಿಶ್ರಿತ ಬಣ್ಣಗಳಿಂದ ಕೂಡಿದ್ದು, ಇವುಗಳನ್ನು ಖರೀದಿಸಿ ಪೂಜಿಸಿದ ಬಳಿಕ ಅವುಗಳನ್ನು ನೀರಿನ ಮೂಲಗಳಲ್ಲಿ ವಿಸರ್ಜಿಸಲಾಗುತ್ತದೆ. ಇದರಿಂದಾಗಿ ಕೆರೆ-ಕಟ್ಟೆಗಳು, ನದಿಗಳು ಮಾಲಿನ್ಯವಾಗುತ್ತವೆ. ಅಲ್ಲದೆ ಜಲಚರಗಳ ಜೀವಕ್ಕೂ ಅಪಾಯವನ್ನು ತಂದೊಡ್ಡುತ್ತವೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣಪತಿ ಮೂರ್ತಿಗಳ ಉತ್ಪಾದನೆಗೆ ನಿಷೇಧವನ್ನೇರಿ ಅವುಗಳನ್ನು ಬಳಸಬಾರದು ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಜನರು ಇದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಇನ್ನು ಮುಂದಾದರೂ ಆಯೋಜಕರು ಪರಿಸರ ಸ್ನೇಹಿ ಗಣಪತಿಯನ್ನು ಕೂರಿಸಿ ಪೂಜಿಸುವ ಜತೆಗೆ ಅಕ್ಕಪಕ್ಕದ ಮನೆಯವರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ. ಆ ಮೂಲಕ ಪರಿಸರ ರಕ್ಷಣೆಗೆ ಮುಂದಾಗಬೇಕಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

9 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

11 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

11 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

11 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

11 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

11 hours ago