Categories: Uncategorized

ಓದುಗರ ಪತ್ರ| ಪರಿಸರ ಸ್ನೇಹಿ ಗಣಪತಿ ಪೂಜಿಸೋಣ

ದೇಶದಲ್ಲಿ ವಿಜೃಂಭಣೆಯಿಂದ ಆಚರಿಸುವ ಹಬ್ಬಗಳಲ್ಲಿ ಗಣೇಶನ ಹಬ್ಬ ಪ್ರಮುಖವಾದದ್ದು. ಎಲ್ಲ ಜನರೂ ಒಗ್ಗಟ್ಟಿನಿಂದ ಗಣೇಶನ ಮೂರ್ತಿಗಳನ್ನು ಕೂರಿಸಿ, ಪೂಜಿಸುವ ಹಬ್ಬ ಇದು.

ಇನ್ನೇನು ಕೆಲ ದಿನಗಳಲ್ಲಿ ಗಣೇಶ ಹಬ್ಬ ಬರಲಿದ್ದು, ಎಲ್ಲ ಗ್ರಾಮಗಳಲ್ಲಿಯೂ ಭರದಿಂದ ತಯಾರಿ ನಡೆಸಲಾಗುತ್ತಿದೆ. ಹಬ್ಬದ ದಿನ ಸಮೀಪವಾಗುತ್ತಿದ್ದಂತೆಯೇ ಬಣ್ಣ ಬಣ್ಣದ ಗಣಪನ ವಿಗ್ರಹಗಳು ಮಾರುಕಟ್ಟೆಗೆ ಬರುತ್ತವೆ. ಇವುಗಳಲ್ಲಿ ಬಹುಪಾಲು ರಾಸಾಯನಿಕ ಮಿಶ್ರಿತ ಬಣ್ಣಗಳಿಂದ ಕೂಡಿದ್ದು, ಇವುಗಳನ್ನು ಖರೀದಿಸಿ ಪೂಜಿಸಿದ ಬಳಿಕ ಅವುಗಳನ್ನು ನೀರಿನ ಮೂಲಗಳಲ್ಲಿ ವಿಸರ್ಜಿಸಲಾಗುತ್ತದೆ. ಇದರಿಂದಾಗಿ ಕೆರೆ-ಕಟ್ಟೆಗಳು, ನದಿಗಳು ಮಾಲಿನ್ಯವಾಗುತ್ತವೆ. ಅಲ್ಲದೆ ಜಲಚರಗಳ ಜೀವಕ್ಕೂ ಅಪಾಯವನ್ನು ತಂದೊಡ್ಡುತ್ತವೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣಪತಿ ಮೂರ್ತಿಗಳ ಉತ್ಪಾದನೆಗೆ ನಿಷೇಧವನ್ನೇರಿ ಅವುಗಳನ್ನು ಬಳಸಬಾರದು ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಜನರು ಇದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಇನ್ನು ಮುಂದಾದರೂ ಆಯೋಜಕರು ಪರಿಸರ ಸ್ನೇಹಿ ಗಣಪತಿಯನ್ನು ಕೂರಿಸಿ ಪೂಜಿಸುವ ಜತೆಗೆ ಅಕ್ಕಪಕ್ಕದ ಮನೆಯವರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ. ಆ ಮೂಲಕ ಪರಿಸರ ರಕ್ಷಣೆಗೆ ಮುಂದಾಗಬೇಕಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago