Categories: Uncategorized

ಓದುಗರ ಪತ್ರ| ಪರಿಸರ ಸ್ನೇಹಿ ಗಣಪತಿ ಪೂಜಿಸೋಣ

ದೇಶದಲ್ಲಿ ವಿಜೃಂಭಣೆಯಿಂದ ಆಚರಿಸುವ ಹಬ್ಬಗಳಲ್ಲಿ ಗಣೇಶನ ಹಬ್ಬ ಪ್ರಮುಖವಾದದ್ದು. ಎಲ್ಲ ಜನರೂ ಒಗ್ಗಟ್ಟಿನಿಂದ ಗಣೇಶನ ಮೂರ್ತಿಗಳನ್ನು ಕೂರಿಸಿ, ಪೂಜಿಸುವ ಹಬ್ಬ ಇದು.

ಇನ್ನೇನು ಕೆಲ ದಿನಗಳಲ್ಲಿ ಗಣೇಶ ಹಬ್ಬ ಬರಲಿದ್ದು, ಎಲ್ಲ ಗ್ರಾಮಗಳಲ್ಲಿಯೂ ಭರದಿಂದ ತಯಾರಿ ನಡೆಸಲಾಗುತ್ತಿದೆ. ಹಬ್ಬದ ದಿನ ಸಮೀಪವಾಗುತ್ತಿದ್ದಂತೆಯೇ ಬಣ್ಣ ಬಣ್ಣದ ಗಣಪನ ವಿಗ್ರಹಗಳು ಮಾರುಕಟ್ಟೆಗೆ ಬರುತ್ತವೆ. ಇವುಗಳಲ್ಲಿ ಬಹುಪಾಲು ರಾಸಾಯನಿಕ ಮಿಶ್ರಿತ ಬಣ್ಣಗಳಿಂದ ಕೂಡಿದ್ದು, ಇವುಗಳನ್ನು ಖರೀದಿಸಿ ಪೂಜಿಸಿದ ಬಳಿಕ ಅವುಗಳನ್ನು ನೀರಿನ ಮೂಲಗಳಲ್ಲಿ ವಿಸರ್ಜಿಸಲಾಗುತ್ತದೆ. ಇದರಿಂದಾಗಿ ಕೆರೆ-ಕಟ್ಟೆಗಳು, ನದಿಗಳು ಮಾಲಿನ್ಯವಾಗುತ್ತವೆ. ಅಲ್ಲದೆ ಜಲಚರಗಳ ಜೀವಕ್ಕೂ ಅಪಾಯವನ್ನು ತಂದೊಡ್ಡುತ್ತವೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣಪತಿ ಮೂರ್ತಿಗಳ ಉತ್ಪಾದನೆಗೆ ನಿಷೇಧವನ್ನೇರಿ ಅವುಗಳನ್ನು ಬಳಸಬಾರದು ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಜನರು ಇದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಇನ್ನು ಮುಂದಾದರೂ ಆಯೋಜಕರು ಪರಿಸರ ಸ್ನೇಹಿ ಗಣಪತಿಯನ್ನು ಕೂರಿಸಿ ಪೂಜಿಸುವ ಜತೆಗೆ ಅಕ್ಕಪಕ್ಕದ ಮನೆಯವರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ. ಆ ಮೂಲಕ ಪರಿಸರ ರಕ್ಷಣೆಗೆ ಮುಂದಾಗಬೇಕಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

24 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

1 hour ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago