ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ವನ್ಯ ಧಾಮ, ಕಾವೇರಿ ವನ್ಯಧಾಮ ಹಾಗೂ ಬಿ ಆರ್ ಟಿ ಸಂರಕ್ಷಿತ ಅರಣ್ಯ ಪ್ರದೇಶಗಳಿದ್ದು ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯಲ್ಲಿ ಸಫಾರಿ ಪ್ರಾರಂಭ ಮಾಡಿರುವುದು ಈ ಭಾಗದ ವನ್ಯಪ್ರಿಯರಿಗೆ ಸಂತಸ ತಂದಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ವಿಭಾಗ ವ್ಯಾಪ್ತಿಯ ಲೊಕ್ಕನಹಳ್ಳಿಯಲ್ಲಿ ಸಫಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಚಾಮರಾಜನಗರ ಜಿಲ್ಲೆಯಲ್ಲಿ ಈಗಾಗಲೇ ಬಂಡಿಪುರ,ಕೆ ಗುಡಿ, ಅರಣ್ಯ ವ್ಯಾಪ್ತಿಯಲ್ಲಿ ಸಫಾರಿ ಹಲವು ವರ್ಷಗಳಿಂದ ನಡೆಯುತ್ತಿದೆ. ಕಾವೇರಿ ವನ್ಯ ಧಾಮದ ಗೋಪಿನಾಥಂನಲ್ಲಿ ಪ್ರಯೋಗವಾಗಿ ಸಫಾರಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಇದೀಗ ನಾಲ್ಕನೇ ಸಫಾರಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ವನ್ಯಜೀವಿ ಪ್ರಿಯರು ಹಾಗೂ ನಾಗರಿಕರು ಈ ಸಫಾರಿ ವ್ಯವಸ್ಥೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅರಣ್ಯದಲ್ಲಿ ಯಾವುದೇ ಪ್ರಾಣಿಗಳಿಗೆ ತೊಂದರೆ ಮಾಡದೆ ಅರಣ್ಯ ಪ್ರದೇಶದಲ್ಲಿರುವ ವನ್ಯ ಸಂಪತ್ತು ಹಾಗೂ ಪ್ರಾಣಿಗಳನ್ನು ವೀಕ್ಷಿಸಲು ಒಳ್ಳೆಯ ಸದಾ ಅವಕಾಶ ಸಿಕ್ಕಿದೆ ಹೀಗಾಗಿ ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜೀವನದಲ್ಲಿ ಎಷ್ಟೇ ಜಂಜಾಟವಿದ್ದರೂ ಈ ಅರಣ್ಯ ಪ್ರದೇಶಕ್ಕೆ ಬಂದು ಸಫಾರಿಗೆ ತೆರಳಿ ವನ್ಯ ಪ್ರಾಣಿಗಳನ್ನು ನೋಡಿದರೆ ಎಲ್ಲವನ್ನು ಮರೆತು ಬಿಡುತ್ತೇವೆ. ಪೋಷಕರುಗಳು ತಮ್ಮ ಮಕ್ಕಳನ್ನು ಸಫಾರಿಗೆ ಕರೆತಂದು ಅರಣ್ಯದಲ್ಲಿರುವ ವಿಶೇಷ ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳಲು ಸಹಕಾರ ನೀಡಬೇಕು ಎಂದರು.
ಪ್ರತಿದಿನ ಸಫಾರಿ ಬೆಳಗ್ಗೆ 6ರಿಂದ 9 ಗಂಟೆಯವರೆಗೆ, ಸಾಯಂಕಾಲ 3 ಗಂಟೆಯಿಂದ ಸಂಜೆ 6 ರವರೆಗೆ ಸಫಾರಿ ಇರಲಿದೆ.
ಕಾರ್ಯಕ್ರಮದಲ್ಲಿ ಮಲೆ ಮಾದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್, ಕಾವೇರಿ ವನ್ಯಜೀವಿಧಾಮದ ಎಸಿಎಫ್ ಅಂಕರಾಜು, ಶಶಿಧರ್, ವಲಯ ಅರಣ್ಯಾಧಿಕಾರಿಗಳಾದ ಶಿವರಾಂ ಪ್ರಮೋದ್, ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್, ಪರಿವರ್ತನಾ ಗ್ರಾಮ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…