Categories: Uncategorized

‘ಹಲಗಲಿ’ ಚಿತ್ರಕ್ಕೆ ಸಪ್ತಮಿ ಗೌಡ ಎಂಟ್ರಿ; ಮತ್ತೊಮ್ಮೆ ಧನಂಜಯ್‍ಗೆ ನಾಯಕಿ

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪಾಪ್‍ಕಾರ್ನ್ ಮಂಕಿ ಟೈಗರ್‍’ ಚಿತ್ರದ ಮೂಲಕ ಸಪ್ತಮಿ ಗೌಡ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಚಿತ್ರದ ಮೂಲಕ ಧನಂಜಯ್‍ಗೆ ಮೊದಲ ಬಾರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ಅವರು ಧನಂಜಯ್‍ಗೆ ನಾಯಕಿಯಾಗಿ ಇನ್ನೂ ಒಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ಧನಂಜಯ್‍, ‘ಹಲಗಲಿ’ ಎಂಬ ಐತಿಹಾಸಿಕ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ‘ಡಾಲಿ’ ಧನಂಜಯ್, ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಧನಂಜಯ್‍ಗೆ ನಾಯಕಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ ಇದಾಗಿದೆ. ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ‘ಹಲಗಲಿ’ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ.

‘ಹಲಗಲಿ’ ಚಿತ್ರದ ಮೂಲಕ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ನಿರ್ಮಾಪಕರಾಗುತ್ತಿದ್ದಾರೆ. ತಮ್ಮ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಸಾಯಿ ಶ್ರೀರಾಮ್‍ ಛಾಯಾಗ್ರಹಣ, ವಾಸುಕಿ ವೈಭವ್‍ ಸಂಗೀತ ಮತ್ತು ವಿಕ್ರಮ್‍ ಮೋರ್‍ ಅವರ ಸಾಹಸ ನಿರ್ದೇಶನವಿದೆ. ಈ ಚಿತ್ರವು ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

‘ಹಲಗಲಿ’ ಚಿತ್ರವಲ್ಲದೆ, ತೆಲುಗಿನ ‘ತಮ್ಮುಡು’ ಎಂಬ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಟ ನಿತಿನ್‍ಗೆ ನಾಯಕಿಯಾಗಿ ಅವರು ನಟಿಸುತ್ತಿದ್ದಾರೆ. ಇನ್ನು, ಕನ್ನಡದಲ್ಲಿ ಅಭಿಷೇಕ್‍ ಅಂಬರೀಷ್‍ ಅಭಿನಯದ ‘ಕಾಳಿ’ ಚಿತ್ರಕ್ಕೂ ಸಪ್ತಮಿ ನಾಯಕಿಯಾಗಿದ್ದರು. ಕೃಷ್ಣ ನಿರ್ದೇಶನದ ಈ ಚಿತ್ರದ ಮುಹೂರ್ತ ಸಹ ಆಗಿತ್ತು. ಆದರೆ, ಕಾರಣಾಂತರಗಳಿಂದ ಈ ಚಿತ್ರವು ನಿಂತಿರುವ ಸುದ್ದಿ ಬಂದಿದೆ.

ಭೂಮಿಕಾ

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

47 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

1 hour ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

2 hours ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

2 hours ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

3 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

3 hours ago