Categories: Uncategorized

‘ಹಲಗಲಿ’ ಚಿತ್ರಕ್ಕೆ ಸಪ್ತಮಿ ಗೌಡ ಎಂಟ್ರಿ; ಮತ್ತೊಮ್ಮೆ ಧನಂಜಯ್‍ಗೆ ನಾಯಕಿ

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪಾಪ್‍ಕಾರ್ನ್ ಮಂಕಿ ಟೈಗರ್‍’ ಚಿತ್ರದ ಮೂಲಕ ಸಪ್ತಮಿ ಗೌಡ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಚಿತ್ರದ ಮೂಲಕ ಧನಂಜಯ್‍ಗೆ ಮೊದಲ ಬಾರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ಅವರು ಧನಂಜಯ್‍ಗೆ ನಾಯಕಿಯಾಗಿ ಇನ್ನೂ ಒಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ಧನಂಜಯ್‍, ‘ಹಲಗಲಿ’ ಎಂಬ ಐತಿಹಾಸಿಕ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ‘ಡಾಲಿ’ ಧನಂಜಯ್, ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಧನಂಜಯ್‍ಗೆ ನಾಯಕಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ ಇದಾಗಿದೆ. ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ‘ಹಲಗಲಿ’ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ.

‘ಹಲಗಲಿ’ ಚಿತ್ರದ ಮೂಲಕ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ನಿರ್ಮಾಪಕರಾಗುತ್ತಿದ್ದಾರೆ. ತಮ್ಮ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಸಾಯಿ ಶ್ರೀರಾಮ್‍ ಛಾಯಾಗ್ರಹಣ, ವಾಸುಕಿ ವೈಭವ್‍ ಸಂಗೀತ ಮತ್ತು ವಿಕ್ರಮ್‍ ಮೋರ್‍ ಅವರ ಸಾಹಸ ನಿರ್ದೇಶನವಿದೆ. ಈ ಚಿತ್ರವು ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

‘ಹಲಗಲಿ’ ಚಿತ್ರವಲ್ಲದೆ, ತೆಲುಗಿನ ‘ತಮ್ಮುಡು’ ಎಂಬ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಟ ನಿತಿನ್‍ಗೆ ನಾಯಕಿಯಾಗಿ ಅವರು ನಟಿಸುತ್ತಿದ್ದಾರೆ. ಇನ್ನು, ಕನ್ನಡದಲ್ಲಿ ಅಭಿಷೇಕ್‍ ಅಂಬರೀಷ್‍ ಅಭಿನಯದ ‘ಕಾಳಿ’ ಚಿತ್ರಕ್ಕೂ ಸಪ್ತಮಿ ನಾಯಕಿಯಾಗಿದ್ದರು. ಕೃಷ್ಣ ನಿರ್ದೇಶನದ ಈ ಚಿತ್ರದ ಮುಹೂರ್ತ ಸಹ ಆಗಿತ್ತು. ಆದರೆ, ಕಾರಣಾಂತರಗಳಿಂದ ಈ ಚಿತ್ರವು ನಿಂತಿರುವ ಸುದ್ದಿ ಬಂದಿದೆ.

ಭೂಮಿಕಾ

Recent Posts

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

29 mins ago

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

2 hours ago

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

3 hours ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

3 hours ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

5 hours ago