Categories: Uncategorized

‘ಹಲಗಲಿ’ ಚಿತ್ರಕ್ಕೆ ಸಪ್ತಮಿ ಗೌಡ ಎಂಟ್ರಿ; ಮತ್ತೊಮ್ಮೆ ಧನಂಜಯ್‍ಗೆ ನಾಯಕಿ

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪಾಪ್‍ಕಾರ್ನ್ ಮಂಕಿ ಟೈಗರ್‍’ ಚಿತ್ರದ ಮೂಲಕ ಸಪ್ತಮಿ ಗೌಡ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಚಿತ್ರದ ಮೂಲಕ ಧನಂಜಯ್‍ಗೆ ಮೊದಲ ಬಾರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ಅವರು ಧನಂಜಯ್‍ಗೆ ನಾಯಕಿಯಾಗಿ ಇನ್ನೂ ಒಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ಧನಂಜಯ್‍, ‘ಹಲಗಲಿ’ ಎಂಬ ಐತಿಹಾಸಿಕ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ‘ಡಾಲಿ’ ಧನಂಜಯ್, ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಧನಂಜಯ್‍ಗೆ ನಾಯಕಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ ಇದಾಗಿದೆ. ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ‘ಹಲಗಲಿ’ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ.

‘ಹಲಗಲಿ’ ಚಿತ್ರದ ಮೂಲಕ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ನಿರ್ಮಾಪಕರಾಗುತ್ತಿದ್ದಾರೆ. ತಮ್ಮ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಸಾಯಿ ಶ್ರೀರಾಮ್‍ ಛಾಯಾಗ್ರಹಣ, ವಾಸುಕಿ ವೈಭವ್‍ ಸಂಗೀತ ಮತ್ತು ವಿಕ್ರಮ್‍ ಮೋರ್‍ ಅವರ ಸಾಹಸ ನಿರ್ದೇಶನವಿದೆ. ಈ ಚಿತ್ರವು ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

‘ಹಲಗಲಿ’ ಚಿತ್ರವಲ್ಲದೆ, ತೆಲುಗಿನ ‘ತಮ್ಮುಡು’ ಎಂಬ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಟ ನಿತಿನ್‍ಗೆ ನಾಯಕಿಯಾಗಿ ಅವರು ನಟಿಸುತ್ತಿದ್ದಾರೆ. ಇನ್ನು, ಕನ್ನಡದಲ್ಲಿ ಅಭಿಷೇಕ್‍ ಅಂಬರೀಷ್‍ ಅಭಿನಯದ ‘ಕಾಳಿ’ ಚಿತ್ರಕ್ಕೂ ಸಪ್ತಮಿ ನಾಯಕಿಯಾಗಿದ್ದರು. ಕೃಷ್ಣ ನಿರ್ದೇಶನದ ಈ ಚಿತ್ರದ ಮುಹೂರ್ತ ಸಹ ಆಗಿತ್ತು. ಆದರೆ, ಕಾರಣಾಂತರಗಳಿಂದ ಈ ಚಿತ್ರವು ನಿಂತಿರುವ ಸುದ್ದಿ ಬಂದಿದೆ.

ಭೂಮಿಕಾ

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago