ಬೆಂಗಳೂರು : ಬೆಂಗಳೂರಿನ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ನಡೆದಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೆ.ಎಸ್.ಪ್ರತಿಮಾ(40) ಅವರ ಹತ್ಯೆ ಪ್ರಕರಣದ ಆರೋಪಿ ಕಿರಣ್ನನ್ನು ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ 10 ದಿನಗಳ ಕಾಲ ಸೋಮವಾರ ಪೊಲೀಸ್ ಕಸ್ಟಡಿಗೆ ನೀಡಿದೆ.
ಸೋಮವಾರ ಬಂಧಿತ ಆರೋಪಿ ಕಿರಣ್ನನ್ನು ವೈದ್ಯಕೀಯ ತಪಾಸಣೆಯ ಬಳಿಕ ಬೆಂಗಳೂರಿನ 2ನೆ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಬಿ.ಎಸ್.ವೇದಮೂರ್ತಿ ಅವರ ಮುಂದೆ ಹಾಜರುಪಡಿಸಲಾಗಿತ್ತು. ಘಟನೆಯ ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್ ಅವರು ಆರೋಪಿಯನ್ನು ನ.15ರ ವರೆಗೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಪ್ರತಿಮಾ ಅವರ ಮಾಜಿ ಕಾರು ಚಾಲಕನಾದ ಆರೋಪಿ ಕಿರಣ್ನನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ಬಂಧಿಸಲಾಗಿತ್ತು. ಕೆಲಸ ಕಳೆದುಕೊಂಡಿದ್ದ ಕಿರಣ್ ಕಳೆದ ಶನಿವಾರ ಪ್ರತಿಮಾ ಅವರ ಮನೆಗೆ ತೆರಳಿ ಮತ್ತೆ ಕೆಲಸಕ್ಕೆ ನೇಮಕ ಮಾಡಿಕೊಳ್ಳುವಂತೆ ಕೋರಿದ್ದ. ಇದಕ್ಕೆ ನಿರಾಕರಿಸಿದ ಕಾರಣಕ್ಕೆ ಪ್ರತಿಮಾ ಅವರನ್ನು ಕೊಲೆ ಮಾಡಿರುವುದಾಗಿ ಕಿರಣ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತುಡ್ಕಿ ಮೂಲದ ಪ್ರತಿಮಾ ಅವರು 2008ರಲ್ಲಿ ಭೂ ವಿಜ್ಞಾನಿಯಾಗಿ ನೇಮಕವಾಗಿದ್ದರು. 2019ರಲ್ಲಿ ಹಿರಿಯ ಭೂ ವಿಜ್ಞಾನಿಯಾಗಿ ಬಡ್ತಿ ಪಡೆದಿದ್ದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…