ನದೆಹಲಿ: ಸುದೀರ್ಘ 17 ವರ್ಷಗಳ ಕಾಯುವಿಕೆಯ ಬಳಿಕ ಟೀಂ ಇಂಡಿಯಾ 9ನೇ ಆವೃತ್ತಿಯ ಟಿ20 ವಿಶ್ವಕಪ್ನ್ನು ಜಯಿಸಿತು. ಇದೀಗ ತನ್ನ ಮುಂದಿನ ಸರಣಿಗಾಗಿ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಂಡಿದೆ.
ಆದರೆ ಇದು ವಿಶ್ವಕಪ್ ಆಡಿದ ತಂಡವಲ್ಲ. ಬದಲಾಗಿ ಮತ್ತೊಂದು ಯುವ ಪಡೆಯನ್ನು ಸಜ್ಜುಗೊಳಿಸಿ ಕಳುಹಿಸಿದೆ. ಇದೇ ಜುಲೈ. 6 ರಿಂದ ಆರಂಭವಾಗಲಿರುವ ಸರಣಿಗೆ ಯುವ ಬ್ಯಾಟರ್ ಶುಭ್ಮನ್ ಗಿಲ್ ನಾಯಕರಾಗಿದ್ದಾರೆ. ಇನ್ನು ಈ ಸರಣಿಗೆ ಒಟ್ಟು 15 ಜನ ಆಟಗಾರರ ತಂಡವೊಂದನ್ನು ಕಳುಹಿಸಿಕೊಡಲಾಗಿದೆ.
ಭಾರತ ಹಾಗೂ ಜಿಂಬಾಬ್ವೆ ನಡುವಣ ಐದು ಚುಟುಕು ಮಾದರಿಯ ಎಲ್ಲಾ ಪಂದ್ಯಗಳು ಹರಾರೆ ಸ್ಪೋರ್ಟ್ಸ್ ಕ್ಲಬ್, ಹರಾರೆಯಲ್ಲಿ ಆಯೋಜನೆಯಾಗಿದೆ.
ಭಾರತ vs ಜಿಂಬಾಬ್ವೆ ಚುಟುಕು ಸರಣಿ ವೇಳಾಪಟ್ಟಿ:
ಮೊದಲ ಟಿ20 ಪಂದ್ಯ: ಜುಲೈ. 6 ರಂದು ಸಂಜೆ 4.30ಕ್ಕೆ
ಎರಡನೇ ಟಿ20 ಪಂದ್ಯ: ಜುಲೈ. 7 ರಂದು ಸಂಜೆ 4.30ಕ್ಕೆ
ಮೂರನೇ ಟಿ20 ಪಂದ್ಯ: ಜುಲೈ. 10 ರಂದು ಸಂಜೆ 4.30ಕ್ಕೆ
ನಾಲ್ಕನೇ ಟಿ20 ಪಂದ್ಯ: ಜುಲೈ. 13 ರಂದು ಸಂಜೆ 4.30ಕ್ಕೆ
ಐದನೇ ಟಿ20 ಪಂದ್ಯ: ಜುಲೈ. 14 ರಂದು ಸಂಜೆ 4.30ಕ್ಕೆ
ಪಂದ್ಯ ಆರಂಭ: ಭಾರತೀಯ ಕಾಲಮಾನ ಪ್ರಕಾರ ಎಲ್ಲಾ ಪಂದ್ಯಗಳು ರಾತ್ರಿ 8 ಗಂಟೆಗೆ ಬದಲಾಗಿ ಸಂಜೆ 4.30ಕ್ಕೆ ಪ್ರಾರಂಭವಾಗುತ್ತದೆ. ಅಂದರೆ ಜಿಂಬಾಬ್ವೆ ಕಾಲಮಾನ ಪ್ರಕಾರ ಮದ್ಯಾಹ್ನ ಒಂದು ಗಂಟೆಗೆ ಪಂದ್ಯ ನಡೆಯಲಿದೆ.
ವೀಕ್ಷಣೆ: ಭಾರತ ಹಾಗೂ ಜಿಂಬಾಬ್ವೆ ನಡುವಣ ಪಂದ್ಯವನ್ನು ಸೋನಿ ನೆಟ್ವರ್ಕ್ನಲ್ಲಿ ಮತ್ತು ಸೋನಿ ಆಪ್ ಮೂಲಕ ವೀಕ್ಷಿಸಬಹುದಾಗಿದೆ.
ಟೀಂ ಇಂಡಿಯಾ: ಶುಭ್ಮನ್ ಗಿಲ್(ನಾಯಕ), ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್(ವಿ.ಕೀ), ಧ್ರವ್ ಜುರೆಲ್, ಶಿವಂ ದುಬೆ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ಖಲೀಲ್ ಅಹ್ಮದ್, ತುಷಾರ್ ದೇಶ್ಪಾಂಡೆ, ಮುಖೇಶ್ ಕುಮಾರ್, ರವಿ ಬಿಷ್ಣೋಯ್, ಆವೇಶ್ ಖಾನ್
ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು…
ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಹಿಳೆಯರು ಒಂದು…
ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್),…
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಪುಟ್ಟ ಗ್ರಾಮ ಬದನವಾಳುಗೆ ೧೯೨೭ಹಾಗೂ ೧೯೩೪ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಕೈಮಗ್ಗ…
ಪ್ರೊ.ಆರ್.ಎಂ.ಚಿಂತಾಮಣಿ ೨೦೨೫-೨೬ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದ ಕೊನೆಯ ವೇಳೆಗೆ (ಡಿಸೆಂಬರ್೨೦೨೫) ದೇಶದಲ್ಲಿ ಉಪಭೋಗ (Consumption) ಮುಂದಾಗಿರುವ ಆರ್ಥಿಕ ಚಟುವಟಿಕೆಗಳು…
ಕೆ.ಬಿ.ರಮೇಶನಾಯಕ ದೇಶದಲ್ಲೇ ಹಲವು ಏಳು-ಬೀಳುಗಳು, ಸ್ಥಿತ್ಯಂತರವನ್ನು ಕಂಡ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯು ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ. ಮುಖ್ಯಮಂತ್ರಿಯಾಗಿ…