Categories: Uncategorized

ಭಾರತ vs ಜಿಂಬಾಬ್ವೆ ಟಿ20 ಸರಣಿ: ಸಂಭಾವ್ಯ ತಂಡ, ಪಂದ್ಯದ ಆರಂಭ ಹಾಗೂ ಲೈವ್‌ ಸ್ಟ್ರೀಮಿಂಗ್‌ ಮಾಹಿತಿ

ನದೆಹಲಿ: ಸುದೀರ್ಘ 17 ವರ್ಷಗಳ ಕಾಯುವಿಕೆಯ ಬಳಿಕ ಟೀಂ ಇಂಡಿಯಾ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನ್ನು ಜಯಿಸಿತು. ಇದೀಗ ತನ್ನ ಮುಂದಿನ ಸರಣಿಗಾಗಿ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಂಡಿದೆ.

ಆದರೆ ಇದು ವಿಶ್ವಕಪ್‌ ಆಡಿದ ತಂಡವಲ್ಲ. ಬದಲಾಗಿ ಮತ್ತೊಂದು ಯುವ ಪಡೆಯನ್ನು ಸಜ್ಜುಗೊಳಿಸಿ ಕಳುಹಿಸಿದೆ. ಇದೇ ಜುಲೈ. 6 ರಿಂದ ಆರಂಭವಾಗಲಿರುವ ಸರಣಿಗೆ ಯುವ ಬ್ಯಾಟರ್‌ ಶುಭ್‌ಮನ್‌ ಗಿಲ್‌ ನಾಯಕರಾಗಿದ್ದಾರೆ. ಇನ್ನು ಈ ಸರಣಿಗೆ ಒಟ್ಟು 15 ಜನ ಆಟಗಾರರ ತಂಡವೊಂದನ್ನು ಕಳುಹಿಸಿಕೊಡಲಾಗಿದೆ.

ಭಾರತ ಹಾಗೂ ಜಿಂಬಾಬ್ವೆ ನಡುವಣ ಐದು ಚುಟುಕು ಮಾದರಿಯ ಎಲ್ಲಾ ಪಂದ್ಯಗಳು ಹರಾರೆ ಸ್ಪೋರ್ಟ್ಸ್‌ ಕ್ಲಬ್‌, ಹರಾರೆಯಲ್ಲಿ ಆಯೋಜನೆಯಾಗಿದೆ.

ಭಾರತ vs ಜಿಂಬಾಬ್ವೆ ಚುಟುಕು ಸರಣಿ ವೇಳಾಪಟ್ಟಿ:

ಮೊದಲ ಟಿ20 ಪಂದ್ಯ: ಜುಲೈ. 6 ರಂದು ಸಂಜೆ 4.30ಕ್ಕೆ
ಎರಡನೇ ಟಿ20 ಪಂದ್ಯ: ಜುಲೈ. 7 ರಂದು ಸಂಜೆ 4.30ಕ್ಕೆ
ಮೂರನೇ ಟಿ20 ಪಂದ್ಯ: ಜುಲೈ. 10 ರಂದು ಸಂಜೆ 4.30ಕ್ಕೆ
ನಾಲ್ಕನೇ ಟಿ20 ಪಂದ್ಯ: ಜುಲೈ. 13 ರಂದು ಸಂಜೆ 4.30ಕ್ಕೆ
ಐದನೇ ಟಿ20 ಪಂದ್ಯ: ಜುಲೈ. 14 ರಂದು ಸಂಜೆ 4.30ಕ್ಕೆ

ಪಂದ್ಯ ಆರಂಭ: ಭಾರತೀಯ ಕಾಲಮಾನ ಪ್ರಕಾರ ಎಲ್ಲಾ ಪಂದ್ಯಗಳು ರಾತ್ರಿ 8 ಗಂಟೆಗೆ ಬದಲಾಗಿ ಸಂಜೆ 4.30ಕ್ಕೆ ಪ್ರಾರಂಭವಾಗುತ್ತದೆ. ಅಂದರೆ ಜಿಂಬಾಬ್ವೆ ಕಾಲಮಾನ ಪ್ರಕಾರ ಮದ್ಯಾಹ್ನ ಒಂದು ಗಂಟೆಗೆ ಪಂದ್ಯ ನಡೆಯಲಿದೆ.

ವೀಕ್ಷಣೆ: ಭಾರತ ಹಾಗೂ ಜಿಂಬಾಬ್ವೆ ನಡುವಣ ಪಂದ್ಯವನ್ನು ಸೋನಿ ನೆಟ್ವರ್ಕ್‌ನಲ್ಲಿ ಮತ್ತು ಸೋನಿ ಆಪ್‌ ಮೂಲಕ ವೀಕ್ಷಿಸಬಹುದಾಗಿದೆ.

ಟೀಂ ಇಂಡಿಯಾ: ಶುಭ್‌ಮನ್‌ ಗಿಲ್‌(ನಾಯಕ), ಯಶಸ್ವಿ ಜೈಸ್ವಾಲ್‌, ಋತುರಾಜ್‌ ಗಾಯಕ್ವಾಡ್‌, ಅಭಿಷೇಕ್‌ ಶರ್ಮಾ, ರಿಂಕು ಸಿಂಗ್‌, ಸಂಜು ಸ್ಯಾಮ್ಸನ್‌(ವಿ.ಕೀ), ಧ್ರವ್‌ ಜುರೆಲ್‌, ಶಿವಂ ದುಬೆ, ರಿಯಾನ್‌ ಪರಾಗ್‌, ವಾಷಿಂಗ್‌ಟನ್‌ ಸುಂದರ್‌, ಖಲೀಲ್‌ ಅಹ್ಮದ್‌, ತುಷಾರ್‌ ದೇಶ್‌ಪಾಂಡೆ, ಮುಖೇಶ್‌ ಕುಮಾರ್‌, ರವಿ ಬಿಷ್ಣೋಯ್‌, ಆವೇಶ್‌ ಖಾನ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

5 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

5 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

5 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

5 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

5 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

6 hours ago