Categories: Uncategorized

ಭಾರತ vs ಜಿಂಬಾಬ್ವೆ ಟಿ20 ಸರಣಿ: ಸಂಭಾವ್ಯ ತಂಡ, ಪಂದ್ಯದ ಆರಂಭ ಹಾಗೂ ಲೈವ್‌ ಸ್ಟ್ರೀಮಿಂಗ್‌ ಮಾಹಿತಿ

ನದೆಹಲಿ: ಸುದೀರ್ಘ 17 ವರ್ಷಗಳ ಕಾಯುವಿಕೆಯ ಬಳಿಕ ಟೀಂ ಇಂಡಿಯಾ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನ್ನು ಜಯಿಸಿತು. ಇದೀಗ ತನ್ನ ಮುಂದಿನ ಸರಣಿಗಾಗಿ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಂಡಿದೆ.

ಆದರೆ ಇದು ವಿಶ್ವಕಪ್‌ ಆಡಿದ ತಂಡವಲ್ಲ. ಬದಲಾಗಿ ಮತ್ತೊಂದು ಯುವ ಪಡೆಯನ್ನು ಸಜ್ಜುಗೊಳಿಸಿ ಕಳುಹಿಸಿದೆ. ಇದೇ ಜುಲೈ. 6 ರಿಂದ ಆರಂಭವಾಗಲಿರುವ ಸರಣಿಗೆ ಯುವ ಬ್ಯಾಟರ್‌ ಶುಭ್‌ಮನ್‌ ಗಿಲ್‌ ನಾಯಕರಾಗಿದ್ದಾರೆ. ಇನ್ನು ಈ ಸರಣಿಗೆ ಒಟ್ಟು 15 ಜನ ಆಟಗಾರರ ತಂಡವೊಂದನ್ನು ಕಳುಹಿಸಿಕೊಡಲಾಗಿದೆ.

ಭಾರತ ಹಾಗೂ ಜಿಂಬಾಬ್ವೆ ನಡುವಣ ಐದು ಚುಟುಕು ಮಾದರಿಯ ಎಲ್ಲಾ ಪಂದ್ಯಗಳು ಹರಾರೆ ಸ್ಪೋರ್ಟ್ಸ್‌ ಕ್ಲಬ್‌, ಹರಾರೆಯಲ್ಲಿ ಆಯೋಜನೆಯಾಗಿದೆ.

ಭಾರತ vs ಜಿಂಬಾಬ್ವೆ ಚುಟುಕು ಸರಣಿ ವೇಳಾಪಟ್ಟಿ:

ಮೊದಲ ಟಿ20 ಪಂದ್ಯ: ಜುಲೈ. 6 ರಂದು ಸಂಜೆ 4.30ಕ್ಕೆ
ಎರಡನೇ ಟಿ20 ಪಂದ್ಯ: ಜುಲೈ. 7 ರಂದು ಸಂಜೆ 4.30ಕ್ಕೆ
ಮೂರನೇ ಟಿ20 ಪಂದ್ಯ: ಜುಲೈ. 10 ರಂದು ಸಂಜೆ 4.30ಕ್ಕೆ
ನಾಲ್ಕನೇ ಟಿ20 ಪಂದ್ಯ: ಜುಲೈ. 13 ರಂದು ಸಂಜೆ 4.30ಕ್ಕೆ
ಐದನೇ ಟಿ20 ಪಂದ್ಯ: ಜುಲೈ. 14 ರಂದು ಸಂಜೆ 4.30ಕ್ಕೆ

ಪಂದ್ಯ ಆರಂಭ: ಭಾರತೀಯ ಕಾಲಮಾನ ಪ್ರಕಾರ ಎಲ್ಲಾ ಪಂದ್ಯಗಳು ರಾತ್ರಿ 8 ಗಂಟೆಗೆ ಬದಲಾಗಿ ಸಂಜೆ 4.30ಕ್ಕೆ ಪ್ರಾರಂಭವಾಗುತ್ತದೆ. ಅಂದರೆ ಜಿಂಬಾಬ್ವೆ ಕಾಲಮಾನ ಪ್ರಕಾರ ಮದ್ಯಾಹ್ನ ಒಂದು ಗಂಟೆಗೆ ಪಂದ್ಯ ನಡೆಯಲಿದೆ.

ವೀಕ್ಷಣೆ: ಭಾರತ ಹಾಗೂ ಜಿಂಬಾಬ್ವೆ ನಡುವಣ ಪಂದ್ಯವನ್ನು ಸೋನಿ ನೆಟ್ವರ್ಕ್‌ನಲ್ಲಿ ಮತ್ತು ಸೋನಿ ಆಪ್‌ ಮೂಲಕ ವೀಕ್ಷಿಸಬಹುದಾಗಿದೆ.

ಟೀಂ ಇಂಡಿಯಾ: ಶುಭ್‌ಮನ್‌ ಗಿಲ್‌(ನಾಯಕ), ಯಶಸ್ವಿ ಜೈಸ್ವಾಲ್‌, ಋತುರಾಜ್‌ ಗಾಯಕ್ವಾಡ್‌, ಅಭಿಷೇಕ್‌ ಶರ್ಮಾ, ರಿಂಕು ಸಿಂಗ್‌, ಸಂಜು ಸ್ಯಾಮ್ಸನ್‌(ವಿ.ಕೀ), ಧ್ರವ್‌ ಜುರೆಲ್‌, ಶಿವಂ ದುಬೆ, ರಿಯಾನ್‌ ಪರಾಗ್‌, ವಾಷಿಂಗ್‌ಟನ್‌ ಸುಂದರ್‌, ಖಲೀಲ್‌ ಅಹ್ಮದ್‌, ತುಷಾರ್‌ ದೇಶ್‌ಪಾಂಡೆ, ಮುಖೇಶ್‌ ಕುಮಾರ್‌, ರವಿ ಬಿಷ್ಣೋಯ್‌, ಆವೇಶ್‌ ಖಾನ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

3 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

4 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

4 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

13 hours ago