Categories: Uncategorized

ಭಾರತ vs ಜಿಂಬಾಬ್ವೆ ಟಿ20 ಸರಣಿ: ಸಂಭಾವ್ಯ ತಂಡ, ಪಂದ್ಯದ ಆರಂಭ ಹಾಗೂ ಲೈವ್‌ ಸ್ಟ್ರೀಮಿಂಗ್‌ ಮಾಹಿತಿ

ನದೆಹಲಿ: ಸುದೀರ್ಘ 17 ವರ್ಷಗಳ ಕಾಯುವಿಕೆಯ ಬಳಿಕ ಟೀಂ ಇಂಡಿಯಾ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನ್ನು ಜಯಿಸಿತು. ಇದೀಗ ತನ್ನ ಮುಂದಿನ ಸರಣಿಗಾಗಿ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಂಡಿದೆ.

ಆದರೆ ಇದು ವಿಶ್ವಕಪ್‌ ಆಡಿದ ತಂಡವಲ್ಲ. ಬದಲಾಗಿ ಮತ್ತೊಂದು ಯುವ ಪಡೆಯನ್ನು ಸಜ್ಜುಗೊಳಿಸಿ ಕಳುಹಿಸಿದೆ. ಇದೇ ಜುಲೈ. 6 ರಿಂದ ಆರಂಭವಾಗಲಿರುವ ಸರಣಿಗೆ ಯುವ ಬ್ಯಾಟರ್‌ ಶುಭ್‌ಮನ್‌ ಗಿಲ್‌ ನಾಯಕರಾಗಿದ್ದಾರೆ. ಇನ್ನು ಈ ಸರಣಿಗೆ ಒಟ್ಟು 15 ಜನ ಆಟಗಾರರ ತಂಡವೊಂದನ್ನು ಕಳುಹಿಸಿಕೊಡಲಾಗಿದೆ.

ಭಾರತ ಹಾಗೂ ಜಿಂಬಾಬ್ವೆ ನಡುವಣ ಐದು ಚುಟುಕು ಮಾದರಿಯ ಎಲ್ಲಾ ಪಂದ್ಯಗಳು ಹರಾರೆ ಸ್ಪೋರ್ಟ್ಸ್‌ ಕ್ಲಬ್‌, ಹರಾರೆಯಲ್ಲಿ ಆಯೋಜನೆಯಾಗಿದೆ.

ಭಾರತ vs ಜಿಂಬಾಬ್ವೆ ಚುಟುಕು ಸರಣಿ ವೇಳಾಪಟ್ಟಿ:

ಮೊದಲ ಟಿ20 ಪಂದ್ಯ: ಜುಲೈ. 6 ರಂದು ಸಂಜೆ 4.30ಕ್ಕೆ
ಎರಡನೇ ಟಿ20 ಪಂದ್ಯ: ಜುಲೈ. 7 ರಂದು ಸಂಜೆ 4.30ಕ್ಕೆ
ಮೂರನೇ ಟಿ20 ಪಂದ್ಯ: ಜುಲೈ. 10 ರಂದು ಸಂಜೆ 4.30ಕ್ಕೆ
ನಾಲ್ಕನೇ ಟಿ20 ಪಂದ್ಯ: ಜುಲೈ. 13 ರಂದು ಸಂಜೆ 4.30ಕ್ಕೆ
ಐದನೇ ಟಿ20 ಪಂದ್ಯ: ಜುಲೈ. 14 ರಂದು ಸಂಜೆ 4.30ಕ್ಕೆ

ಪಂದ್ಯ ಆರಂಭ: ಭಾರತೀಯ ಕಾಲಮಾನ ಪ್ರಕಾರ ಎಲ್ಲಾ ಪಂದ್ಯಗಳು ರಾತ್ರಿ 8 ಗಂಟೆಗೆ ಬದಲಾಗಿ ಸಂಜೆ 4.30ಕ್ಕೆ ಪ್ರಾರಂಭವಾಗುತ್ತದೆ. ಅಂದರೆ ಜಿಂಬಾಬ್ವೆ ಕಾಲಮಾನ ಪ್ರಕಾರ ಮದ್ಯಾಹ್ನ ಒಂದು ಗಂಟೆಗೆ ಪಂದ್ಯ ನಡೆಯಲಿದೆ.

ವೀಕ್ಷಣೆ: ಭಾರತ ಹಾಗೂ ಜಿಂಬಾಬ್ವೆ ನಡುವಣ ಪಂದ್ಯವನ್ನು ಸೋನಿ ನೆಟ್ವರ್ಕ್‌ನಲ್ಲಿ ಮತ್ತು ಸೋನಿ ಆಪ್‌ ಮೂಲಕ ವೀಕ್ಷಿಸಬಹುದಾಗಿದೆ.

ಟೀಂ ಇಂಡಿಯಾ: ಶುಭ್‌ಮನ್‌ ಗಿಲ್‌(ನಾಯಕ), ಯಶಸ್ವಿ ಜೈಸ್ವಾಲ್‌, ಋತುರಾಜ್‌ ಗಾಯಕ್ವಾಡ್‌, ಅಭಿಷೇಕ್‌ ಶರ್ಮಾ, ರಿಂಕು ಸಿಂಗ್‌, ಸಂಜು ಸ್ಯಾಮ್ಸನ್‌(ವಿ.ಕೀ), ಧ್ರವ್‌ ಜುರೆಲ್‌, ಶಿವಂ ದುಬೆ, ರಿಯಾನ್‌ ಪರಾಗ್‌, ವಾಷಿಂಗ್‌ಟನ್‌ ಸುಂದರ್‌, ಖಲೀಲ್‌ ಅಹ್ಮದ್‌, ತುಷಾರ್‌ ದೇಶ್‌ಪಾಂಡೆ, ಮುಖೇಶ್‌ ಕುಮಾರ್‌, ರವಿ ಬಿಷ್ಣೋಯ್‌, ಆವೇಶ್‌ ಖಾನ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

1 hour ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

1 hour ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

1 hour ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

2 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

2 hours ago

ಭಾರತವನ್ನು ನರಕಕೂಪ ಎಂದು ಹೀಯಾಳಿಸಿದ ಡೊನಾಲ್ಡ್ ಟ್ರಂಪ್‌: ವಿದೇಶಾಂಗ ಇಲಾಖೆ ಕಿಡಿ

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…

3 hours ago