Categories: Uncategorized

ಭಾರತ vs ಜಿಂಬಾಬ್ವೆ ಟಿ20 ಸರಣಿ: ಸಂಭಾವ್ಯ ತಂಡ, ಪಂದ್ಯದ ಆರಂಭ ಹಾಗೂ ಲೈವ್‌ ಸ್ಟ್ರೀಮಿಂಗ್‌ ಮಾಹಿತಿ

ನದೆಹಲಿ: ಸುದೀರ್ಘ 17 ವರ್ಷಗಳ ಕಾಯುವಿಕೆಯ ಬಳಿಕ ಟೀಂ ಇಂಡಿಯಾ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನ್ನು ಜಯಿಸಿತು. ಇದೀಗ ತನ್ನ ಮುಂದಿನ ಸರಣಿಗಾಗಿ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಂಡಿದೆ.

ಆದರೆ ಇದು ವಿಶ್ವಕಪ್‌ ಆಡಿದ ತಂಡವಲ್ಲ. ಬದಲಾಗಿ ಮತ್ತೊಂದು ಯುವ ಪಡೆಯನ್ನು ಸಜ್ಜುಗೊಳಿಸಿ ಕಳುಹಿಸಿದೆ. ಇದೇ ಜುಲೈ. 6 ರಿಂದ ಆರಂಭವಾಗಲಿರುವ ಸರಣಿಗೆ ಯುವ ಬ್ಯಾಟರ್‌ ಶುಭ್‌ಮನ್‌ ಗಿಲ್‌ ನಾಯಕರಾಗಿದ್ದಾರೆ. ಇನ್ನು ಈ ಸರಣಿಗೆ ಒಟ್ಟು 15 ಜನ ಆಟಗಾರರ ತಂಡವೊಂದನ್ನು ಕಳುಹಿಸಿಕೊಡಲಾಗಿದೆ.

ಭಾರತ ಹಾಗೂ ಜಿಂಬಾಬ್ವೆ ನಡುವಣ ಐದು ಚುಟುಕು ಮಾದರಿಯ ಎಲ್ಲಾ ಪಂದ್ಯಗಳು ಹರಾರೆ ಸ್ಪೋರ್ಟ್ಸ್‌ ಕ್ಲಬ್‌, ಹರಾರೆಯಲ್ಲಿ ಆಯೋಜನೆಯಾಗಿದೆ.

ಭಾರತ vs ಜಿಂಬಾಬ್ವೆ ಚುಟುಕು ಸರಣಿ ವೇಳಾಪಟ್ಟಿ:

ಮೊದಲ ಟಿ20 ಪಂದ್ಯ: ಜುಲೈ. 6 ರಂದು ಸಂಜೆ 4.30ಕ್ಕೆ
ಎರಡನೇ ಟಿ20 ಪಂದ್ಯ: ಜುಲೈ. 7 ರಂದು ಸಂಜೆ 4.30ಕ್ಕೆ
ಮೂರನೇ ಟಿ20 ಪಂದ್ಯ: ಜುಲೈ. 10 ರಂದು ಸಂಜೆ 4.30ಕ್ಕೆ
ನಾಲ್ಕನೇ ಟಿ20 ಪಂದ್ಯ: ಜುಲೈ. 13 ರಂದು ಸಂಜೆ 4.30ಕ್ಕೆ
ಐದನೇ ಟಿ20 ಪಂದ್ಯ: ಜುಲೈ. 14 ರಂದು ಸಂಜೆ 4.30ಕ್ಕೆ

ಪಂದ್ಯ ಆರಂಭ: ಭಾರತೀಯ ಕಾಲಮಾನ ಪ್ರಕಾರ ಎಲ್ಲಾ ಪಂದ್ಯಗಳು ರಾತ್ರಿ 8 ಗಂಟೆಗೆ ಬದಲಾಗಿ ಸಂಜೆ 4.30ಕ್ಕೆ ಪ್ರಾರಂಭವಾಗುತ್ತದೆ. ಅಂದರೆ ಜಿಂಬಾಬ್ವೆ ಕಾಲಮಾನ ಪ್ರಕಾರ ಮದ್ಯಾಹ್ನ ಒಂದು ಗಂಟೆಗೆ ಪಂದ್ಯ ನಡೆಯಲಿದೆ.

ವೀಕ್ಷಣೆ: ಭಾರತ ಹಾಗೂ ಜಿಂಬಾಬ್ವೆ ನಡುವಣ ಪಂದ್ಯವನ್ನು ಸೋನಿ ನೆಟ್ವರ್ಕ್‌ನಲ್ಲಿ ಮತ್ತು ಸೋನಿ ಆಪ್‌ ಮೂಲಕ ವೀಕ್ಷಿಸಬಹುದಾಗಿದೆ.

ಟೀಂ ಇಂಡಿಯಾ: ಶುಭ್‌ಮನ್‌ ಗಿಲ್‌(ನಾಯಕ), ಯಶಸ್ವಿ ಜೈಸ್ವಾಲ್‌, ಋತುರಾಜ್‌ ಗಾಯಕ್ವಾಡ್‌, ಅಭಿಷೇಕ್‌ ಶರ್ಮಾ, ರಿಂಕು ಸಿಂಗ್‌, ಸಂಜು ಸ್ಯಾಮ್ಸನ್‌(ವಿ.ಕೀ), ಧ್ರವ್‌ ಜುರೆಲ್‌, ಶಿವಂ ದುಬೆ, ರಿಯಾನ್‌ ಪರಾಗ್‌, ವಾಷಿಂಗ್‌ಟನ್‌ ಸುಂದರ್‌, ಖಲೀಲ್‌ ಅಹ್ಮದ್‌, ತುಷಾರ್‌ ದೇಶ್‌ಪಾಂಡೆ, ಮುಖೇಶ್‌ ಕುಮಾರ್‌, ರವಿ ಬಿಷ್ಣೋಯ್‌, ಆವೇಶ್‌ ಖಾನ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago