ಮೈಸೂರು : ರಾಜ್ಯದಲ್ಲಿ ಮುಂದಿನ ಹದಿನೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆಯಾಗದೇ ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ ಮಟ್ಟ ಏರಿಳಿತವಾಗುತ್ತಿರುತ್ತದೆ. ಇಂದು ರಾಜ್ಯದ ಪ್ರಮುಖ ಜಲಾಶಯ ಎಂದೆನಿಸಿರುವ ಕೆ ಆರ್ ಎಸ್ ( ಕೃಷ್ಣ ರಾಜ ಸಾಗರ) ಹಾಗೂ ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 100.80 ಅಡಿ
ಒಳ ಹರಿವಿನ ಪ್ರಮಾಣ – 1,686 ಕ್ಯೂ
ಹೊರ ಹರಿವಿನ ಪ್ರಮಾಣ – 4,156 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಇಂದಿನ ನೀರಿನ ಮಟ್ಟ – 2,275.34 ಅಡಿ
ಒಳ ಹರಿವಿನ ಪ್ರಮಾಣ – 166 ಕ್ಯೂ
ಹೊರ ಹರಿವಿನ ಪ್ರಮಾಣ – 800 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2,847.57 ಅಡಿ
ಒಳ ಹರಿವಿನ ಪ್ರಮಾಣ – 130 ಕ್ಯೂ
ಹೊರ ಹರಿವಿನ ಪ್ರಮಾಣ – 1,800 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2894.00 ಅಡಿ
ಒಳ ಹರಿವಿನ ಪ್ರಮಾಣ – 403 ಕ್ಯೂ
ಹೊರ ಹರಿವಿನ ಪ್ರಮಾಣ – 1,340 ಕ್ಯೂ
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ತೀರದ ಜಿಲ್ಲೆಗಳಾಗಿರುವ ಉತ್ತರ ಕನ್ನಡ,ದಕ್ಷಿಣ ಕನ್ನಡ, ಹಾಗೂ ಉಡುಪಿ,ಮಲೆನಾಡು ಭಾಗದಲ್ಲಿ ಸಾಧಾರಣ ಮಾಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…