Categories: Uncategorized

ಬಿಡದಿ ಬಳಿ ಟೌನ್‌ಶಿಪ್‌ ವಿಚಾರ : ʼಎಚ್‌.ಡಿ. ದೇವೇಗೌಡʼರಿಗೆ ʼಡಿಕೆಶಿʼ ಟಾಂಗ್‌

ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯಲ್ಲಿ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೂ ಟೌನ್‌ಶಿಪ್‌ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ತೀವ್ರವಾಗಿ ವೀರೋಧಿಸಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಟಾಂಗ್‌ ನೀಡಿದ್ದಾರೆ.

ಬಿಡದಿ ಟೌನ್ ಶಿಪ್ ಗೆ ರೈತರ ಭೂಮಿ ಕೈಬಿಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ದೇವೇಗೌಡರ ಪತ್ರ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಕಾಲದಲ್ಲೇ 7 ಟೌನ್ ಶಿಪ್ ಮಾಡಬೇಕು ಅಂತ ತೀರ್ಮಾನ ಆಗಿದ್ದು, ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ರು ಟೌನ್ ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು, ನಾನು ಡಿನೋಟಿಫಿಕೇಶ್ ಮಾಡಲು ಹೋಗಲ್ಲ ಎಂದಿದ್ದಾರೆ.

ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದ್ರು ಅದೆಲ್ಲ ಇತಿಹಾಸ. ಟೌನ್ ಶಿಪ್ ಪಿತಾಮಹ ದೇವೇಗೌಡ ಹಾಗೂ ಕುಮಾರಸ್ವಾಮಿ ಯಾರು ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು ಮಾಡೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗತ್ತೆ ಎಂದರು.

ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ರೆ ಅಭಿವೃದ್ದಿ ಪಡಿಸಿದ ಲ್ಯಾಂಡ್ ತೆಗೆದುಕೊಳ್ಳಬಹುದು. ಎರಡು ಬಾರಿ ಕುಮಾರಸ್ವಾಮಿ ಸಿಎಂ ಆದ್ರೂ ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ. ಇದೆಲ್ಲ ನಿಮ್ಮ ಮಗನೆ ಮಾಡಿದ್ದು, ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ದೇವೇಗೌಡರಿಗೆ ಟಾಂಗ್ ನೀಡಿದರು.

ಒಳಿತಾಗಲೆಂದು ಆರತಿ ಮಾಡ್ತೇವೆ: ಕಾವೇರಿ ನಮ್ಮ ಜೀವನದಿ. ತಾಯಿಯ ಆರತಿ ಮಾಡ್ಬೇಕು. ಹೀಗಾಗಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ, ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯದ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಹೇಳಿದರು.

ದಸರಾ ಕ್ರೀಡೆಗೆ ಕಂಬಳ ಸೇರ್ಪಡೆ: ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ.ಕೆಲ ಹೊಸ ಆಚರಣೆಗಳನ್ನು ಸೇರಿಸಬೇಕು. ಹಳೆಯ ಪದ್ಧತಿ ಜೊತೆಗೆ ಹೊಸ ಆಚರಣೆಗಳು ದಸರಾ ಮೆರಗನ್ನು ಹೆಚ್ಚು ಮಾಡುತ್ತವೆ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ಈ ಬಾರಿ ದಸರಾದಲ್ಲಿ ಅನೇಕ ಬದಲಾವಣೆ ಆಗತ್ತೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

23 mins ago

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

48 mins ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

2 hours ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

13 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

15 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

16 hours ago