Uncategorized

ಮೈಸೂರು ವಿವಿಯಲ್ಲಿ ಶ್ರೀನಿವಾಸ್‌ಪ್ರಸಾದ್‌ಗೆ ನುಡಿನಮನ

ಮೈಸೂರು: ಹಿರಿಯ ಮುತ್ಸದ್ಧಿ ರಾಜಕಾರಣಿ, ಸಂಸದರಾಗಿದ್ದ ದಿವಗಂತ ವಿ.ಶ್ರೀನಿವಾಸ್‌ಪ್ರಸಾದ್‌ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣಾ ಅಧ್ಯಯನ ಕೇಂದ್ರದಲ್ಲಿ ಬುಧುವಾರ ನುಡಿನಮನ ಕಾರ್ಯಕ್ರಮ ನಡೆಯಿತು.

ಮೈಸೂರಿನ ವಿಶ್ವಮೈತ್ರಿ ಬುದ್ದವಿಹಾರದ ಭಂತೆ ಡಾ.ಕಲ್ಯಾಣಸಿರಿ ಅವರು ಶ್ರೀನಿವಾಸ್ ಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನುಡಿನಮನ ಸಲ್ಲಿಸಿದರು. ಈ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣಾ ಕೇಂದ್ರದ ನಿರ್ದೇಶಕ ಪ್ರೊ.ಜೆ.ಸೋಮಶೇಖರ್ ಹಾಗೂ ಇನ್ನಿತರ ಗಣ್ಯರು ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮೈಸೂರು ವಿವಿ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಪ್ರೊ.ಡಿ ಆನಂದ್‌, ಕ್ರಿಕೆಟ್‌ಗೆ ಸಚ್ಚಿನ್‌ ತೆಂಡೂಲ್ಕರ್, ಕನ್ನಡಕ್ಕೆ ಡಾ.ರಾಜ್‌ಕುಮಾರ್‌ ಹಾಗಾಯೇ ಅಂಬೇಡ್ಕರ್‌ ಕುರಿತು ಮಾತನಾಡುವುದಕ್ಕೆ ಶ್ರೀನಿವಾಸ್‌ಪ್ರಸಾದ್‌ ಮಾದರಿಯಾಗಿದ್ದರು ಎಂದು ಅಭಿಪ್ರಾಯಪಟ್ಟರು.

ಕರ್ನಾಟಕದಲ್ಲಿ ಬಿಎಸ್‌ಪಿಯಿಂದ ದಲಿತ ವಿದ್ಯಾರ್ಥಿಗಳಲ್ಲಿ ರಾಜಕೀಯ ಶಕ್ತಿ ವೃದ್ಧಿಸುತ್ತಾ ಬಂತು. ದಲಿತ ಸಮುದಾಯದವರಲ್ಲಿ ಹೆಚ್ಚಿನ ಆಸ್ತಿಯಿಲ್ಲ, ನಮ್ಮ ಜನ ಜಮೀನ್ದಾರರಲ್ಲ. ಹಾಗಾಗಿ ನಮಗೆ ರಾಜಕೀಯದ ಹಾದಿ ಅಷ್ಟು ಸುಲಭವಾಗಿರಲಿಲ್ಲ. ಹಂತ ಹಂತವಾಗಿ ಹೋರಾಟ ನಡೆಸಿ, ತಳಮಟ್ಟದಿಂದ ಶ್ರಮಿಸಿ ರಾಜಕೀಯ ಅಧಿಕಾರ ಪಡೆಯಿರಿ ಎಂದು ಪ್ರಸಾದ್‌ ಅವರು ನಮಗೆ ಸಲಹೆ ನೀಡುತ್ತಿದ್ದರು ಎಂದು ತಿಳಿಸಿದರು.

ಮೈಸೂರಿನ ಮಹಾರಾಣಿ ಕಾಲೇಜು ಹಾಸ್ಟೆಲ್‌ನಲ್ಲಿ ದಲಿತ ಮತ್ತು ಇತರೆ ಜಾತಿಯ ಹೆಣ್ಣು ಮಕ್ಕಳ ನಡುವೆ ಗಲಾಟೆ ನಡೆದಾಗ ತುಂಬಾ ತಾಳ್ಮೆವಹಿಸಿ ಪರಿಸ್ಥಿತಿ ನಿಯಂತ್ರಿಸಿದ್ದರು. ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದಲ್ಲಿ ಅಂಬೇಡ್ಕರ್ ಜಯಂತಿ ವೇಳೆ ನಾಯಕತ್ವದ ವಿಚಾರವಾಗಿ ಉಂಟಾದ ವೈಮನಸ್ಸನ್ನು ಪ್ರಸಾದ್ ಅವರು ನಿಭಾಯಿಸಿದ್ದನ್ನು ಎಂದು ಮರೆಯಲಾಗದು. ಹೀಗೆ ಪ್ರಸಾದ್‌ ಮೈಸೂರು ಭಾಗದಲ್ಲಿ ದಲಿತ ನಾಯಕ ಸ್ಥಾನ ತುಂಬುವಲ್ಲಿ ಯಶಸ್ವಿಯಾಗಿದ್ದರು ಎಂದು ಹೇಳಿದರು.

ಪ್ರಸಾದ್‌ ಅವರು ಸಮಾಜಶಾಸ್ತ್ರ ಹಾಗೂ ರಾಜಕೀಯ ಪ್ರಾಧ್ಯಾಪಕರಂತಿದ್ದರು. ಪಿ.ವಿ.ನರಸಿಂಹರಾವ್ ಅವರಿಗೆ ಆಫ್ರಿಕಾದ ಜನಾಂಗೀಯ ನಿಂದನೆ ಅಮಾನವೀಯ ಕಳಂಕ ಎನ್ನುವುದಾದರೆ ಭಾರತದಲ್ಲಿನ ಅಸ್ಪಶ್ಯತೆ ಏಕೆ ಕಾಣುವುದಿಲ್ಲ ಎಂದು ದಿಟ್ಟವಾಗಿ ಹೇಳುವ ಎದೆಗಾರಿಕೆ ಅವರಿಗಿತ್ತು. ಅವರ ವಿಚಾರ, ನಿಲುವು, ಅವರು ನೀಡುತಿದ್ದ ದಿಟ್ಟ ಹೇಳಿಕೆಗಳು ಮನಮುಟ್ಟುವಂತಿದ್ದವು ಎಂದರು.

ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಎಸ್.ನರೇಂದ್ರಕುಮಾರ್, ಎಂ.ಬಿ.ಜಯಶಂಕರ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago