ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು( ಫೆಬ್ರುವರಿ 1ರಂದು) ಬಜೆಟ್ ಮಂಡಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಮಂಡಿಸಲಿರುವ ಬಜೆಟ್ನ್ನು ಮಧ್ಯಂತರ ಬಜೆಟ್ ಎಂದು ಪರಿಗಣಿಸಲಾಗುತ್ತದೆ. ಅಂದರೆ ಇದು ಇಡೀ ವರ್ಷಕ್ಕೆ ಅನ್ವಯ ಆಗುವುದಿಲ್ಲ. ಚುನಾವಣೆ ಮುಗಿದು ಹೊಸ ಸರ್ಕಾರ ಬಂದು ಹೊಸ ಬಜೆಟ್ ಮಂಡನೆ ಆಗುವವರೆಗೂ ಈ ಮಧ್ಯಂತರ ಬಜೆಟ್ ಹಣಕಾಸು ಬಳಕೆಗೆ ಕೀಲಿ ಒದಗಿಸುತ್ತದೆ.
ಹಿಂದೆಲ್ಲಾ ಫೆಬ್ರುವರಿ ತಿಂಗಳ ಕೊನೆಯ ಕಾರ್ಯದಿನದಂದು ಬಜೆಟ್ ಮಂಡನೆ ಆಗುತ್ತಿತ್ತು. ಬ್ರಿಟಿಷರ ಕಾಲದಿಂದ ಬಂದ ರೂಢಿಯನ್ನೇ ಮುಂದುವರಿಸಲಾಗಿತ್ತು. ಆದರೆ, ಕೆಲ ವರ್ಷಗಳ ಹಿಂದೆ ಬಜೆಟ್ ದಿನವನ್ನು ಫೆಬ್ರುವರಿ 1ಕ್ಕೆ ನಿಗದಿ ಮಾಡಲಾಗಿದೆ. ಏಪ್ರಿಲ್ನಿಂದ ಶುರುವಾಗುವ ಹಣಕಾಸು ವರ್ಷಕ್ಕೆ ಬಜೆಟ್ ಅಂಶಗಳನ್ನು ಅಳವಡಿಸಲು ಸಾಕಷ್ಟು ಸಮಯಾವಕಾಶ ಸಿಗುತ್ತದೆ.
ಈ ಬಾರಿಯದ್ದು ಮಧ್ಯಂತರ ಬಜೆಟ್ ಆದರೂ ಫೆಬ್ರುವರಿ ಒಂದಕ್ಕೆಯೇ ಇರುತ್ತದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಬೆಳಗ್ಗೆ 11ಗಂಟೆಗೆ ಜಂಟಿ ಸದನದಲ್ಲಿ ಬಜೆಟ್ ಮಂಡಿಸುತ್ತಾರೆ. ಸಾಮಾನ್ಯವಾಗಿ ಬಜೆಟ್ ಭಾಷಣ ಎರಡೂವರೆಗೆ ಗಂಟೆ ಇರುತ್ತದೆ.
ಬಜೆಟ್ ಸಂಬಂಧಿತ ಪ್ರಮುಖ ಅಂಶಗಳು
ಜ. 24: ಹಲ್ವಾ ಕಾರ್ಯಕ್ರಮ
ಜ. 29: ಆರ್ಥಿಕ ಸಮೀಕ್ಷಾ ವರದಿ ಬದಲು ಆರ್ಥಿಕ ಪರಾಮರ್ಶೆ ವರದಿ
ಜ. 30: ಕೇಂದ್ರ ಸರ್ಕಾರದಿಂದ ಸರ್ವಪಕ್ಷ ಸಭೆ
ಜ. 31: ಬಜೆಟ್ ಸೆಷನ್ ಆರಂಭ, ರಾಷ್ಟ್ರಪತಿಗಳಿಂದ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ
ಫೆ. 1: ಬೆಳಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮ್ ಅವರಿಂದ ಮಧ್ಯಂತರ ಬಜೆಟ್ ಮಂಡನೆ ಆರಂಭ
ಫೆ. 9: ಬಜೆಟ್ ಸೆಷನ್ ಮುಕ್ತಾಯ
ನಿರ್ಮಲಾ ಸೀತಾರಾಮನ್ ಬಜೆಟ್ ದಾಖಲೆ:
ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ ಎರಡನೇ ಮಹಿಳೆಯಾಗಿದ್ದಾರೆ. ಇಂದಿರಾ ಗಾಂಧಿ ಈ ಹಿಂದೆ ಬಜೆಟ್ ಮಂಡಿಸಿದ್ದರು.
ನಿರ್ಮಲಾ ಸೀತಾರಾಮನ್ ಈವರೆಗೆ ಐದು ಬಾರಿ ಬಜೆಟ್ ಮಂಡಿಸಿದ್ದಾರೆ. ಫೆ. 1ರಂದು ಅವರೇ ಮಾಡಿದರೆ ಆರನೇ ಬಜೆಟ್ ಮಂಡಿಸಿದ ದಾಖಲೆ ಬರೆಯಲಿದ್ದಾರೆ.
ಮೊರಾರ್ಜಿ ದೇಸಾಯಿ ಮಾತ್ರವೇ ಸತತ ಆರು ಬಜೆಟ್ ಮಂಡಿಸಿರುವುದು. ಐದು ಪೂರ್ಣ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು ಮೊರಾರ್ಜಿ. ಒಟ್ಟು ಅವರು 10 ಬಜೆಟ್ ಮಂಡನೆ ಮಾಡಿದ್ದರು.
ಯಶವಂತ್ ಸಿನ್ಹಾ, ಅರುಣ್ ಜೇಟ್ಲಿ, ಮನಮೋಹನ್ ಸಿಂಗ್, ಪಿ ಚಿದಂಬರಂ ಅವರು ಸತತವಾಗಿ ಐದು ಬಾರಿ ಬಜೆಟ್ ಮಂಡಿಸಿದ್ದರು. ನಿರ್ಮಲಾ ಸೀತಾರಾಮನ್ ಈ ದಾಖಲೆ ಸರಿಗಟ್ಟಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…