Uncategorized

ಕೇಂದ್ರ ಬಜೆಟ್-2024: ಸಮಯ, ಸೆಷನ್ ಮತ್ತಿತರ ವಿವರ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು( ಫೆಬ್ರುವರಿ 1ರಂದು) ಬಜೆಟ್ ಮಂಡಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಮಂಡಿಸಲಿರುವ ಬಜೆಟ್‌ನ್ನು ಮಧ್ಯಂತರ ಬಜೆಟ್ ಎಂದು ಪರಿಗಣಿಸಲಾಗುತ್ತದೆ. ಅಂದರೆ ಇದು ಇಡೀ ವರ್ಷಕ್ಕೆ ಅನ್ವಯ ಆಗುವುದಿಲ್ಲ. ಚುನಾವಣೆ ಮುಗಿದು ಹೊಸ ಸರ್ಕಾರ ಬಂದು ಹೊಸ ಬಜೆಟ್ ಮಂಡನೆ ಆಗುವವರೆಗೂ ಈ ಮಧ್ಯಂತರ ಬಜೆಟ್ ಹಣಕಾಸು ಬಳಕೆಗೆ ಕೀಲಿ ಒದಗಿಸುತ್ತದೆ.

ಹಿಂದೆಲ್ಲಾ ಫೆಬ್ರುವರಿ ತಿಂಗಳ ಕೊನೆಯ ಕಾರ್ಯದಿನದಂದು ಬಜೆಟ್ ಮಂಡನೆ ಆಗುತ್ತಿತ್ತು. ಬ್ರಿಟಿಷರ ಕಾಲದಿಂದ ಬಂದ ರೂಢಿಯನ್ನೇ ಮುಂದುವರಿಸಲಾಗಿತ್ತು. ಆದರೆ, ಕೆಲ ವರ್ಷಗಳ ಹಿಂದೆ ಬಜೆಟ್ ದಿನವನ್ನು ಫೆಬ್ರುವರಿ 1ಕ್ಕೆ ನಿಗದಿ ಮಾಡಲಾಗಿದೆ. ಏಪ್ರಿಲ್​ನಿಂದ ಶುರುವಾಗುವ ಹಣಕಾಸು ವರ್ಷಕ್ಕೆ ಬಜೆಟ್ ಅಂಶಗಳನ್ನು ಅಳವಡಿಸಲು ಸಾಕಷ್ಟು ಸಮಯಾವಕಾಶ ಸಿಗುತ್ತದೆ.

ಈ ಬಾರಿಯದ್ದು ಮಧ್ಯಂತರ ಬಜೆಟ್ ಆದರೂ ಫೆಬ್ರುವರಿ ಒಂದಕ್ಕೆಯೇ ಇರುತ್ತದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಬೆಳಗ್ಗೆ 11ಗಂಟೆಗೆ ಜಂಟಿ ಸದನದಲ್ಲಿ ಬಜೆಟ್ ಮಂಡಿಸುತ್ತಾರೆ. ಸಾಮಾನ್ಯವಾಗಿ ಬಜೆಟ್ ಭಾಷಣ ಎರಡೂವರೆಗೆ ಗಂಟೆ ಇರುತ್ತದೆ.

ಬಜೆಟ್ ಸಂಬಂಧಿತ ಪ್ರಮುಖ ಅಂಶಗಳು

ಜ. 24: ಹಲ್ವಾ ಕಾರ್ಯಕ್ರಮ
ಜ. 29: ಆರ್ಥಿಕ ಸಮೀಕ್ಷಾ ವರದಿ ಬದಲು ಆರ್ಥಿಕ ಪರಾಮರ್ಶೆ ವರದಿ
ಜ. 30: ಕೇಂದ್ರ ಸರ್ಕಾರದಿಂದ ಸರ್ವಪಕ್ಷ ಸಭೆ
ಜ. 31: ಬಜೆಟ್ ಸೆಷನ್ ಆರಂಭ, ರಾಷ್ಟ್ರಪತಿಗಳಿಂದ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ
ಫೆ. 1: ಬೆಳಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮ್ ಅವರಿಂದ ಮಧ್ಯಂತರ ಬಜೆಟ್ ಮಂಡನೆ ಆರಂಭ
ಫೆ. 9: ಬಜೆಟ್ ಸೆಷನ್ ಮುಕ್ತಾಯ

ನಿರ್ಮಲಾ ಸೀತಾರಾಮನ್ ಬಜೆಟ್ ದಾಖಲೆ:

ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ ಎರಡನೇ ಮಹಿಳೆಯಾಗಿದ್ದಾರೆ. ಇಂದಿರಾ ಗಾಂಧಿ ಈ ಹಿಂದೆ ಬಜೆಟ್ ಮಂಡಿಸಿದ್ದರು.

ನಿರ್ಮಲಾ ಸೀತಾರಾಮನ್ ಈವರೆಗೆ ಐದು ಬಾರಿ ಬಜೆಟ್ ಮಂಡಿಸಿದ್ದಾರೆ. ಫೆ. 1ರಂದು ಅವರೇ ಮಾಡಿದರೆ ಆರನೇ ಬಜೆಟ್ ಮಂಡಿಸಿದ ದಾಖಲೆ ಬರೆಯಲಿದ್ದಾರೆ.

ಮೊರಾರ್ಜಿ ದೇಸಾಯಿ ಮಾತ್ರವೇ ಸತತ ಆರು ಬಜೆಟ್ ಮಂಡಿಸಿರುವುದು. ಐದು ಪೂರ್ಣ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು ಮೊರಾರ್ಜಿ. ಒಟ್ಟು ಅವರು 10 ಬಜೆಟ್ ಮಂಡನೆ ಮಾಡಿದ್ದರು.

ಯಶವಂತ್ ಸಿನ್ಹಾ, ಅರುಣ್ ಜೇಟ್ಲಿ, ಮನಮೋಹನ್ ಸಿಂಗ್, ಪಿ ಚಿದಂಬರಂ ಅವರು ಸತತವಾಗಿ ಐದು ಬಾರಿ ಬಜೆಟ್ ಮಂಡಿಸಿದ್ದರು. ನಿರ್ಮಲಾ ಸೀತಾರಾಮನ್ ಈ ದಾಖಲೆ ಸರಿಗಟ್ಟಿದ್ದಾರೆ.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

3 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

4 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

4 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

4 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

5 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

5 hours ago