Uncategorized

ಕೇಂದ್ರ ಬಜೆಟ್-2024: ಸಮಯ, ಸೆಷನ್ ಮತ್ತಿತರ ವಿವರ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು( ಫೆಬ್ರುವರಿ 1ರಂದು) ಬಜೆಟ್ ಮಂಡಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಮಂಡಿಸಲಿರುವ ಬಜೆಟ್‌ನ್ನು ಮಧ್ಯಂತರ ಬಜೆಟ್ ಎಂದು ಪರಿಗಣಿಸಲಾಗುತ್ತದೆ. ಅಂದರೆ ಇದು ಇಡೀ ವರ್ಷಕ್ಕೆ ಅನ್ವಯ ಆಗುವುದಿಲ್ಲ. ಚುನಾವಣೆ ಮುಗಿದು ಹೊಸ ಸರ್ಕಾರ ಬಂದು ಹೊಸ ಬಜೆಟ್ ಮಂಡನೆ ಆಗುವವರೆಗೂ ಈ ಮಧ್ಯಂತರ ಬಜೆಟ್ ಹಣಕಾಸು ಬಳಕೆಗೆ ಕೀಲಿ ಒದಗಿಸುತ್ತದೆ.

ಹಿಂದೆಲ್ಲಾ ಫೆಬ್ರುವರಿ ತಿಂಗಳ ಕೊನೆಯ ಕಾರ್ಯದಿನದಂದು ಬಜೆಟ್ ಮಂಡನೆ ಆಗುತ್ತಿತ್ತು. ಬ್ರಿಟಿಷರ ಕಾಲದಿಂದ ಬಂದ ರೂಢಿಯನ್ನೇ ಮುಂದುವರಿಸಲಾಗಿತ್ತು. ಆದರೆ, ಕೆಲ ವರ್ಷಗಳ ಹಿಂದೆ ಬಜೆಟ್ ದಿನವನ್ನು ಫೆಬ್ರುವರಿ 1ಕ್ಕೆ ನಿಗದಿ ಮಾಡಲಾಗಿದೆ. ಏಪ್ರಿಲ್​ನಿಂದ ಶುರುವಾಗುವ ಹಣಕಾಸು ವರ್ಷಕ್ಕೆ ಬಜೆಟ್ ಅಂಶಗಳನ್ನು ಅಳವಡಿಸಲು ಸಾಕಷ್ಟು ಸಮಯಾವಕಾಶ ಸಿಗುತ್ತದೆ.

ಈ ಬಾರಿಯದ್ದು ಮಧ್ಯಂತರ ಬಜೆಟ್ ಆದರೂ ಫೆಬ್ರುವರಿ ಒಂದಕ್ಕೆಯೇ ಇರುತ್ತದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಬೆಳಗ್ಗೆ 11ಗಂಟೆಗೆ ಜಂಟಿ ಸದನದಲ್ಲಿ ಬಜೆಟ್ ಮಂಡಿಸುತ್ತಾರೆ. ಸಾಮಾನ್ಯವಾಗಿ ಬಜೆಟ್ ಭಾಷಣ ಎರಡೂವರೆಗೆ ಗಂಟೆ ಇರುತ್ತದೆ.

ಬಜೆಟ್ ಸಂಬಂಧಿತ ಪ್ರಮುಖ ಅಂಶಗಳು

ಜ. 24: ಹಲ್ವಾ ಕಾರ್ಯಕ್ರಮ
ಜ. 29: ಆರ್ಥಿಕ ಸಮೀಕ್ಷಾ ವರದಿ ಬದಲು ಆರ್ಥಿಕ ಪರಾಮರ್ಶೆ ವರದಿ
ಜ. 30: ಕೇಂದ್ರ ಸರ್ಕಾರದಿಂದ ಸರ್ವಪಕ್ಷ ಸಭೆ
ಜ. 31: ಬಜೆಟ್ ಸೆಷನ್ ಆರಂಭ, ರಾಷ್ಟ್ರಪತಿಗಳಿಂದ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ
ಫೆ. 1: ಬೆಳಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮ್ ಅವರಿಂದ ಮಧ್ಯಂತರ ಬಜೆಟ್ ಮಂಡನೆ ಆರಂಭ
ಫೆ. 9: ಬಜೆಟ್ ಸೆಷನ್ ಮುಕ್ತಾಯ

ನಿರ್ಮಲಾ ಸೀತಾರಾಮನ್ ಬಜೆಟ್ ದಾಖಲೆ:

ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ ಎರಡನೇ ಮಹಿಳೆಯಾಗಿದ್ದಾರೆ. ಇಂದಿರಾ ಗಾಂಧಿ ಈ ಹಿಂದೆ ಬಜೆಟ್ ಮಂಡಿಸಿದ್ದರು.

ನಿರ್ಮಲಾ ಸೀತಾರಾಮನ್ ಈವರೆಗೆ ಐದು ಬಾರಿ ಬಜೆಟ್ ಮಂಡಿಸಿದ್ದಾರೆ. ಫೆ. 1ರಂದು ಅವರೇ ಮಾಡಿದರೆ ಆರನೇ ಬಜೆಟ್ ಮಂಡಿಸಿದ ದಾಖಲೆ ಬರೆಯಲಿದ್ದಾರೆ.

ಮೊರಾರ್ಜಿ ದೇಸಾಯಿ ಮಾತ್ರವೇ ಸತತ ಆರು ಬಜೆಟ್ ಮಂಡಿಸಿರುವುದು. ಐದು ಪೂರ್ಣ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು ಮೊರಾರ್ಜಿ. ಒಟ್ಟು ಅವರು 10 ಬಜೆಟ್ ಮಂಡನೆ ಮಾಡಿದ್ದರು.

ಯಶವಂತ್ ಸಿನ್ಹಾ, ಅರುಣ್ ಜೇಟ್ಲಿ, ಮನಮೋಹನ್ ಸಿಂಗ್, ಪಿ ಚಿದಂಬರಂ ಅವರು ಸತತವಾಗಿ ಐದು ಬಾರಿ ಬಜೆಟ್ ಮಂಡಿಸಿದ್ದರು. ನಿರ್ಮಲಾ ಸೀತಾರಾಮನ್ ಈ ದಾಖಲೆ ಸರಿಗಟ್ಟಿದ್ದಾರೆ.

andolanait

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

6 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

6 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

11 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

11 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

11 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

11 hours ago