ರಾಜ್ಕೋಟ್ : ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ರಾಜಸ್ಥಾನ ತಂಡವನ್ನು ಮಣಿಸಿದ ಹರಿಯಾಣ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.
ಇಂದು (ಡಿಸೆಂಬರ್ 16) ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ 30 ರನ್ಗಳ ಅಂತರದಿಂದ ಗೆಲುವು ದಾಖಲಿಸುವ ಮೂಲಕ ತನ್ನ ಮೊಲದ ಪ್ರಶಸ್ತಿ ಗೆದ್ದುಕೊಂಡಿತು.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹರಿಯಾಣ ತಂಡ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 287 ರನ್ ಕಲೆಹಾಕಿತು. ತಂಡಡದ ಪರ ಅಂಕಿತ್ ಕುಮಾರ್ (88) ನಾಯಕ ಮನಾರಿಯ (70) ರನ್ ಗಳಿಸಿ ತಂಡಕ್ಕೆ ಭದ್ರ ಬುನಾದಿ ಹಾಕಿದರು. ಉಳಿದಂತೆ ರೋಹಿತ್ ಪ್ರಮೋದ್ ಶರ್ಮಾ (20) ನಿಶಾಂತ್ ಸಿಂಧು (29) ಸುಮಿತ್ ಕುಮಾರ್ (28) ರನ್ ಕಲೆಹಾಕಿದರು.
ರಾಜಸ್ಥಾನ ಪರ ಅನಿಕೇತ್ ಚೌಧರಿ 49/4 ಅರ್ಫಾತ್ ಖಾನ್ 59/2 ವಿಕೆಟ್ ಪಡೆದರು.
287 ರನ್ ಗುರಿ ಬೆನ್ನಟ್ಟಿದ ರಾಜಸ್ಥಾನಕ್ಕೆ ಆರಂಭಿಕ ಆಘಾತ ಎದುರಾಯಿತು. ರಾಂ ಮೋಹನ್ ಚೌಹಾಣ್ (1) ಲಾಮ್ರೋರ್ (2) ಮತ್ತು ನಾಯಕ ಶೂನ್ಯಕ್ಕೆ ಔಟಾದರು. ಒಂದೆಡೆ ವಿಕೆಟ್ ಬೀಳುತ್ತಿದ್ದರು ಭದ್ರವಾಗಿ ನಿಂತು ಬ್ಯಾಟಿಂಗ್ ಮಾಡಿದ ಅಭಿಜಿತ್ ತೋಮರ್ 129 ಎಸೆತಗಳಲ್ಲಿ 10 ಬೌಂಡರಿ ಮತ್ತು ಎರಡು ಸಿಕ್ಸರ್ ಮೂಲಕ 106 ರನ್ ಬಾರಿಸಿದರು ಹಾಗೂ ಕುನಾಲ್ ಸಿಂಗ್ ರಾಥೋಡ್ 79 ರನ್ ಗಳಿಸಿದ ಹೋರಾಟದ ಇನ್ನಿಂಗ್ಸ್ ಹೊರತಾಗಿಯೂ ಕೊನೆಯ ಕ್ಷಣದಲ್ಲಿ ಪಂದ್ಯವನ್ನು ಕೈಚೆಲ್ಲಿ 48 ಓವರ್ಗಳ ಅಂತ್ಯಕ್ಕೆ ತನ್ನೇಲ್ಲ ವಿಕೆಟ್ ಕಳೆದುಕೊಂಡು 257 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
ರಾಜಸ್ಥಾನ ತಂಡ ಹರಿಯಾಣ ವಿರುದ್ಧ 30 ರನ್ಗಳ ಸೋಲು ಅನುಭವಿಸಿ ಮೊದಲ ಬಾರಿಗೆ ವಿಜಯ್ ಹಜಾರೆ ಟ್ರೋಫಿ ಎತ್ತಿಹಿಡಿಯುವ ಅವಕಾಶದಿಂದ ವಂಚಿತವಾಯಿತು.
ಪಂದ್ಯ ಶ್ರೇಷ್ಠ: ಸುಮಿತ್ ಕುಮಾರ್
ಸರಣಿ ಶ್ರೇಷ್ಠ: ಸುಮಿತ್ ಕುಮಾರ್
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…