Categories: Uncategorized

Vijay Hazare trophy: ಹರಿಯಾಣಕ್ಕೆ ಚೊಚ್ಚಲ ಟ್ರೋಫಿ

ರಾಜ್‌ಕೋಟ್‌ : ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್‌ ಹಣಾಹಣಿಯಲ್ಲಿ ರಾಜಸ್ಥಾನ ತಂಡವನ್ನು ಮಣಿಸಿದ ಹರಿಯಾಣ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

ಇಂದು (ಡಿಸೆಂಬರ್ 16) ಸೌರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ 30 ರನ್‌ಗಳ ಅಂತರದಿಂದ ಗೆಲುವು ದಾಖಲಿಸುವ ಮೂಲಕ ತನ್ನ ಮೊಲದ ಪ್ರಶಸ್ತಿ ಗೆದ್ದುಕೊಂಡಿತು.

ಟಾಸ್‌ ಗೆದ್ದು ಮೊದಲು ಬ್ಯಾಟ್ ಮಾಡಿದ ಹರಿಯಾಣ ತಂಡ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 287 ರನ್ ಕಲೆಹಾಕಿತು. ತಂಡಡದ ಪರ ಅಂಕಿತ್‌ ಕುಮಾರ್‌ (88) ನಾಯಕ ಮನಾರಿಯ (70) ರನ್‌ ಗಳಿಸಿ ತಂಡಕ್ಕೆ ಭದ್ರ ಬುನಾದಿ ಹಾಕಿದರು. ಉಳಿದಂತೆ ರೋಹಿತ್‌ ಪ್ರಮೋದ್‌ ಶರ್ಮಾ (20) ನಿಶಾಂತ್‌ ಸಿಂಧು (29) ಸುಮಿತ್‌ ಕುಮಾರ್‌ (28) ರನ್‌ ಕಲೆಹಾಕಿದರು.

ರಾಜಸ್ಥಾನ ಪರ ಅನಿಕೇತ್‌ ಚೌಧರಿ 49/4 ಅರ್ಫಾತ್‌ ಖಾನ್‌ 59/2 ವಿಕೆಟ್‌ ಪಡೆದರು.

287 ರನ್‌ ಗುರಿ ಬೆನ್ನಟ್ಟಿದ ರಾಜಸ್ಥಾನಕ್ಕೆ ಆರಂಭಿಕ ಆಘಾತ ಎದುರಾಯಿತು. ರಾಂ ಮೋಹನ್‌ ಚೌಹಾಣ್‌ (1) ಲಾಮ್ರೋರ್‌ (2) ಮತ್ತು ನಾಯಕ ಶೂನ್ಯಕ್ಕೆ ಔಟಾದರು. ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಭದ್ರವಾಗಿ ನಿಂತು ಬ್ಯಾಟಿಂಗ್‌ ಮಾಡಿದ ಅಭಿಜಿತ್ ತೋಮರ್ 129 ಎಸೆತಗಳಲ್ಲಿ 10 ಬೌಂಡರಿ ಮತ್ತು ಎರಡು ಸಿಕ್ಸರ್‌ ಮೂಲಕ 106 ರನ್‌ ಬಾರಿಸಿದರು ಹಾಗೂ ಕುನಾಲ್ ಸಿಂಗ್ ರಾಥೋಡ್ 79 ರನ್‌ ಗಳಿಸಿದ ಹೋರಾಟದ ಇನ್ನಿಂಗ್ಸ್ ಹೊರತಾಗಿಯೂ ಕೊನೆಯ ಕ್ಷಣದಲ್ಲಿ ಪಂದ್ಯವನ್ನು ಕೈಚೆಲ್ಲಿ 48 ಓವರ್​ಗಳ ಅಂತ್ಯಕ್ಕೆ ತನ್ನೇಲ್ಲ ವಿಕೆಟ್ ಕಳೆದುಕೊಂಡು 257 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ರಾಜಸ್ಥಾನ ತಂಡ ಹರಿಯಾಣ ವಿರುದ್ಧ 30 ರನ್​ಗಳ ಸೋಲು ಅನುಭವಿಸಿ ಮೊದಲ ಬಾರಿಗೆ ವಿಜಯ್ ಹಜಾರೆ ಟ್ರೋಫಿ ಎತ್ತಿಹಿಡಿಯುವ ಅವಕಾಶದಿಂದ ವಂಚಿತವಾಯಿತು.

ಪಂದ್ಯ ಶ್ರೇಷ್ಠ: ಸುಮಿತ್‌ ಕುಮಾರ್‌
ಸರಣಿ ಶ್ರೇಷ್ಠ: ಸುಮಿತ್‌ ಕುಮಾರ್‌

andolanait

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

8 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

8 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

8 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

8 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

9 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

10 hours ago