Mysore
31
few clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ

ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ ದಿನ ಪೂರೈಸಿದ್ದು, ಇದೇನು ಮೈಲಿಗಲ್ಲಲ್ಲ. ಬಡವರಿಗೆ, ದಲಿತರಿಗೆ, ಹಿಂದುಳಿದ ವರ್ಗದವರಿಗೆ, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಇದನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದರು.

ಹಾವೇರಿಯಲ್ಲಿ ಶನಿವಾರ ಮಾತನಾಡಿದ ಅವರು, ಸಾಧನಾ ಸಮಾವೇಶಕ್ಕೆ ಬಿಜೆಪಿಯವರು ವಿರೋಧ ಮಾಡುತ್ತಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ ಬಿಜೆಪಿಯವರು ಹೊಟ್ಟೆ ಕಿಚ್ಚಿನಿಂದ ಹಾಗೆ ವಿರೋಧ ಮಾಡುತ್ತಿದ್ದಾರೆ. ಏಕೆಂದರೆ, ಅವರು ಏನೂ ಮಾಡಲಿಲ್ಲವಲ್ಲ. ಅದಕ್ಕೋಸ್ಕರ ವಿರೋಧ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯ ಆರ್. ಅಶೋಕ್ ಹಾಗೂ ಸುನೀಲ್ ಕುಮಾರ್ ಅವರು ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿದೆ, ಆರ್ಥಿಕತೆ ಕುಸಿದಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾಲ್ಕು ವರ್ಷದಲ್ಲಿ ಅವರು ಏನು ಮಾಡಿದರು. 2018ರಲ್ಲಿ ಅವರು 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಶೇ.10 ರಷ್ಟು ಭರವಸೆಗಳನ್ನು ಈಡೇರಿಸಲು ಅವರಿಗೆ ಸಾಧ್ಯವಾಗಿಲ್ಲ. ಇದು ಅವರ ಪರಿಸ್ಥಿತಿ. ನಮ್ಮನ್ನು ಟೀಕಿಸುವುದಕ್ಕೆ ಅವರಿಗೆ ಏನು ನೈತಿಕತೆ ಇದೆ?. ನಾವು ಎರಡೂವರೆ ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದವುಗಳನ್ನೂ ಈಡೇರಿಸಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಬಿ.ವೈ.ರಾಘವೇಂದ್ರ ಅವರು ವಚನ ಭ್ರಷ್ಟ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಸಿಎಂ, ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಅಂತಾ ತಿಳಿಸಿದ್ದೇನೆ. ಆದರೂ ನೀವು ಪುನಃ ಪುನಃ ಅದನ್ನೇ ಏಕೆ ಕೇಳುತ್ತೀರಿ ಎಂದು ಮರು ಪ್ರಶ್ನಿಸಿದರು. ಶ್ರಮಕ್ಕೆ ಫಲ ಸಿಗುತ್ತೆ ಎಂಬ ಡಿಕೆಶಿ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಟ್ವೀಟ್ ಮಾಡ್ತಾ, ಹೈಕಮಾಂಡ್ ಹೇಳಲಿ ಎಂದು ಹೇಳಿದರು.

Tags:
error: Content is protected !!