Categories: Uncategorized

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಮಂಡ್ಯ ರಮೇಶ್, ಸಾಧು ಕೋಕಿಲಾ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಉಚ್ಚ ನ್ಯಾಯಲಯ ರಿಲೀಫ್ ನೀಡಿದೆ.

2017ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸಾಕ್ಷ್ಯಧಾರ ಕೊರತೆ ಹಿನ್ನೆಲೆಯಲ್ಲಿ ರದ್ದು ಮಾಡಿ ಉಚ್ಚ ನ್ಯಾಯಾಲಯ ಆದೇಶ ನೀಡಿದೆ. ಆ ಮೂಲಕ ಕನ್ನಡದ ಹಿರಿಯ ನಟರು ನಿರಾಳವಾಗಿದ್ದಾರೆ. 2017ರಲ್ಲಿ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ಅವರು ಮೈಸೂರಿನ ಪಾರ್ಲರ್‌ವೊಂದರಲ್ಲಿ ಮಸಾಜ್ ಮಾಡಿಸಿಕೊಂಡಿದ್ದರು. ಈ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಇಬ್ಬರು ನಟರು ತನಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆಂದು ಆರೋಪವನ್ನು ಮಾಡಿ, ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು.

ಆ ಸಮಯದಲ್ಲಿ ಪ್ರಕರಣ ಸಂಬಂಧ ಇಬ್ಬರು ನಟರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. 2017ರಲ್ಲಿ ಉಚ್ಚ ನ್ಯಾಯಾಲಯ ಪ್ರಕರಣದ ವಿಚಾರಣೆಗೆ ತಡೆ ನೀಡಿತ್ತು. ಇದೀಗ ಸಾಕ್ಷಾಧಾರಗಳ ಕೊರತೆಯ ಹಿನ್ನೆಲೆ ಪ್ರಕರಣವನ್ನು ರದ್ದು ಮಾಡಲಾಗಿದೆ.

ಎಫ್‌ಐಆರ್‌ನಲ್ಲಿ ಹೆಸರಿಲ್ಲ, ಹಾಗೂ ಆರೋಪಕ್ಕೆ ಸಾಕ್ಷ್ಯಗಳಿಲ್ಲವೆಂದು ಮಂಡ್ಯ ರಮೇಶ್ ಮತ್ತು ಸಾಧು ಕೋಕಿಲ ಪರವಾಗಿ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ವಾದ ಮಂಡಿಸಿದ್ದರು. ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಉಚ್ಚ ನ್ಯಾಯಾಲಯದ ಪೀಠ ಈ ಆದೇಶ ಹೊರಡಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago