ಮಹಿಳೆ

ಸರ್ಗಂ ಕೌಶಲ್ ವಿಶ್ವದ ಚೆಲುವೆಯಾಗಿದ್ದು ಹೇಗೆ ಗೊತ್ತೇ..?

ಸರ್ಗಂ ಕೌಶಲ್ ವಿಶ್ವದ ಚೆಲುವೆಯಾಗಿದ್ದು ಹೇಗೆ ಗೊತ್ತೇ..?

ಕಾಶ್ಮೀರಿ ಚೆಲುವೆಯೊಬ್ಬಳು 21 ವರ್ಷದ ಬಳಿಕ ವಿಶ್ವ ಸೌಂದರ್ಯ ಸ್ಪರ್ಧೆಯ ಕಿರೀಟವನ್ನು ಭಾರತಕ್ಕೆ ತಂದುಕೊಟ್ಟಿದ್ದಾರೆ. ಜಮ್ಮು ಮೂಲದ ಸರ್ಗಂ ಕೌಶಲ್ ಅವರು ಲಾಸ್ ವೆಗಾಸ್ ನಲ್ಲಿ ಡಿ.18ರಂದು ಜರುಗಿದ ಸ್ಪರ್ಧೆಯಲ್ಲಿ ಸುಮಾರು 63 ದೇಶಗಳ ಸುಂದರಿಯರೊಂದಿಗೆ ಸ್ಪರ್ಧಿಸಿ ಮಿಸೆಸ್ ವರ್ಲ್ಡ್ 2022 ಕಿರೀಟವನ್ನು ಮುಡಿಗೇರಿಸಿಕೊಂಡು ಗೆಲುವಿನ ನಗೆ ಬೀರಿದ್ದಾರೆ. ತಮ್ಮ ಸಾಧನೆಯ ಫೋಟೋಗಳನ್ನು ಅವರು ಇನ್‌ ಸ್ಟಾ ಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವುಗಳಲ್ಲಿ ಆಯ್ದ ಫೋಟೋಗಳು ಇಲ್ಲಿವೆ.

 

ಮಿಸೆಸ್ ವರ್ಲ್ಡ್ ವಿವಾಹಿತ ಮಹಿಳೆಯರಿಗೆ ಮೀಸಲಾದ ಸ್ಪರ್ಧೆ. 21 ವರ್ಷಗಳ ಬಳಿಕ ಭಾರತಕ್ಕೆ ಒಲಿದ ಪ್ರಶಸ್ತಿ

2001ರಲ್ಲಿ ವೈದ್ಯೆಯಾಗಿದ್ದ ಅದಿತಿ ಗೋವಿತ್ರಿಕರ್ ಅವರು ಮಿಸೆಸ್ ವರ್ಲ್ಡ್ ಆಗಿ ಆಯ್ಕೆಯಾಗಿದ್ದರು. ಈಗ ಶಿಕ್ಷಕಿಯಾಗಿರುವ ಸರ್ಗಂ ಕೌಶಲ್‌ ಈ ಕಿರೀಟ ಒಲಿದಿದೆ.

 


1990ರ ಸೆ.17 ರಂದು ಜಮ್ಮುವಿನ ಜಿ.ಎಸ್. ಕೌಶಲ್ ಹಾಗೂ ರೀನಾ ಕಾಜೂರಿಯ ದಂಪತಿ ಪುತ್ರಿಯಾಗಿ ಜನಿಸಿದ ಸರ್ಗಂ ಪ್ರತಿಭಾನ್ವಿತ ವಿದ್ಯಾರ್ಥಿನಿ.

ಜಮ್ಮುವಿನ ಪ್ರೆಸೆಂಟೇಶನ್ ಕಾನ್ವೆಂಟ್, ಗಾಂಧಿನಗರ ಸೀನಿಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಸರ್ಗಂ, ಜಮ್ಮು ವಿವಿಯ ಇಂಗ್ಲೀಷ್ ಸಾಹಿತ್ಯ ಸ್ನಾತಕೋತ್ತರ ಪದವೀಧರೆ.

ಸರ್ಗಂ ಕೌಶಲ್ ಗೆ ತನಗಿಂತ ಏಳು ವರ್ಷ ಕಿರಿಯನಾದ ಮಂಥನ್ ಕೌಶಲ್ ಎಂಬ ಸಹೋದರನಿದ್ದಾನೆ.

ಸರ್ಗಂ ಕೌಶಲ್ 2018 ರಲ್ಲಿ ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್ ಕರ್ನಲ್ ಆದಿತ್ಯ ಮನಮೋಹನ್ ಶರ್ಮಾ ಅವರನ್ನು ವಿವಾಹವಾಗುತ್ತಾರೆ.

 


ಇದೇ ವರ್ಷದ ಜೂನ್ ತಿಂಗಳಿನಲ್ಲಿ 2022-ರ ಮಿಸೆಸ್ ಇಂಡಿಯಾ ವರ್ಲ್ಡ್ ಸ್ಪರ್ಧೆಯನ್ನು ಗೆದ್ದ ಸರ್ಗಂ ವಿಶ್ವ ಸುಂದರಿ ಸ್ಪರ್ಧೆಗೆ ಆಯ್ಕೆಯಾಗಿದ್ದರು.

ಜಮ್ಮುವಿನ ಕೆ.ಸಿ.ಇಂಟರ್‌ ನ್ಯಾಷನಲ್ ಸ್ಕೂಲ್‌ ನಲ್ಲಿ ಶಿಕ್ಷಕಿಯಾಗಿರುವ ಸರ್ಗಂ ತನ್ನ 32 ನೇ ವಯಸ್ಸಿನಲ್ಲಿ ಮಿಸೆಸ್‌ ವರ್ಲ್ಡ್‌ ಸ್ಪರ್ಧೆಯಲ್ಲಿ ಗೆದ್ದಿದ್ದಾರೆ.

ಸಂಪ್ರದಾಯಸ್ಥ ಕುಟುಂಬದಲ್ಲಿ ಹುಟ್ಟಿದ ಸರ್ಗಂ, ಶುದ್ಧ ಶಾಖಾಹಾರಿ. ತಮ್ಮ ಫಿಟ್ನೆಸ್‌ ಗೆ ಆಹಾರ ಪದ್ಧತಿಯೂ ನೆರವಾಗಿದೆ ಎನ್ನುತ್ತಾರೆ ಅವರು.

ಸತತ ಪರಿಶ್ರಮ,ಬದ್ಧತೆ,ನೌಕಾದಳದಲ್ಲಿ ಸೇವೆ ಸಲ್ಲಿಸುತ್ತಿರುವ ಪತಿ ಆದಿತ್ಯ ಅವರ ಬೆಂಬಲದಿಂದ ಸರ್ಗಂ ಈ ಸಾಧನೆ ಮಾಡಲು ಸಾಧ್ಯವಾಗಿದೆ.

ಕೊನೆಯ ಹಂತದವರೆಗೂ ನಿಕಟ ಪೈಪೋಟಿ ನೀಡಿದ್ದ ಪಾಲಿನೇಶಿಯಾ ಅವರನ್ನು ಸೋಲಿಸಿ ವಿಶ್ವ ಸುಂದರಿ ಕಿರೀಟಕ್ಕೆ ಭಾಜನನರಾದ ಸರ್ಗಂ

 

andolanait

Share
Published by
andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago