ಮಹಿಳೆ

ಮಹಿಳೆಯರ ದಸರೆಯಲ್ಲಿ ಮಹಿಳಾ ಉದ್ಯಮಿಗಳ ಕಲರವ

ಮೈಸೂರು: ನಗರದ ಜೆಕೆ ಮೈದಾನದಲ್ಲಿ ಮಂಗಳವಾರದಿಂದ ಆರಂಭವಾದ ಮಹಿಳಾ ದಸರೆಯಲ್ಲಿ ನೂರಾರು ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳ ಪ್ರದರ್ಶನದೊಂದಿಗೆ ಮಾರಾಟಕ್ಕೆ ಅಣಿಯಾಗಿದ್ದಾರೆ. ಮಹಿಳಾ ದಸರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಐದು ದಿನ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ, ಮಂಗಳಮುಖಿಯರಿಗೆ, ವಿಶೇಷಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಸ್ತ್ರೀ ಸಬಲೀಕರಣಕ್ಕಾಗಿ ನಮ್ಮ ಸರ್ಕಾರ ಮಹಿಳಾ ಸ್ವಸಹಾಯ ಸಂಘಕ್ಕೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ ಎಂದರು.
ಜಾನಪದ ಕಲಾ ಪ್ರದರ್ಶನದೊಂದಿಗೆ ಮೇಳಕ್ಕೆ ಅದ್ದೂರಿ ಆರಂಭ ನೀಡಲಾಯಿತು. ಮೇಳದಲ್ಲಿ ತಿಂಡಿ ತಿನಿಸು, ಬಟ್ಟೆಬರೆಯಿಂದ ಹಿಡಿದು ನಾನಾ ಉತ್ಪನ್ನಗಳ ಪ್ರದರ್ಶನ ಇದ್ದು, ನಾನಾ ಸ್ಪರ್ಧೆಗಳಿಗೂ ಅವಕಾಶ ನೀಡಲಾಗಿದೆ.
ಶಾಸಕ ಎಲ್.ನಾಗೇಂದ್ರ ಮಾತನಾಡಿದರು. ಮೇಯರ್ ಶಿವಕುಮಾರ್, ಉಪ ಮೇಯರ್ ರೂಪಾ, ಜಿಪಂ ಉಪ ಕಾರ್ಯದರ್ಶಿ ಪ್ರೇಮಕುಮಾರ್, ನಗರ ಪಾಲಿಕೆ ಸದಸ್ಯರಾದ ಪ್ರಮಿಳಾ ಭರತ್, ಸಮಿತಿಯ ಅಧ್ಯಕ್ಷರಾದ ಸುನಾಂದ ರಾಜ್, ಹೇಮ ನಂದೀಶ್, ತನುಜಾ ಮಹೇಶ್ ಇತರರು ಇದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅತಿಥಿಗಳನ್ನು ಜಾನಪದ ಕಲಾ ತಂಡಗಳ ಮೂಲಕ ಸ್ವಾಗತಿಸಲಾಯಿತು. ೪೫ ಮಾರಾಟ ಮತ್ತು ಪ್ರದರ್ಶನ ಮಳಿಗೆಗಳಿಗೆ ಇಲ್ಲಿ ಅವಕಾಶ ಮಾಡಿಕೊಡಲಾಗಿತ್ತು. ಟೇಪ್ ಕತ್ತರಿಸುವ ಮೂಲಕ ಎಸ್.ಟಿ.ಸೋಮಶೇಖರ್ ವಸ್ತುಗಳ ಮಾರಾಟಕ್ಕೆ ಚಾಲನೆ ನೀಡಿದರು.

andolanait

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

14 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

15 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

15 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

20 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

21 hours ago