ಮಹಿಳೆ

ಮಹಿಳಾ ಕಾರ್ಮಿಕರ ಸುರಕ್ಷತೆಗೆ ಕಾನೂನು : ವಿಧಾನಸಭೆಯಲ್ಲಿ ಕಾರ್ಖಾನೆಗಳ ತಿದ್ದುಪಡಿಗೆ ವಿಧೇಯಕ ಮಂಡನೆ

ಬೆಂಗಳೂರು: ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಗೆ ಸೂಕ್ತ ಸುರಕ್ಷತೆಯೊಂದಿಗೆ 24 ಗಂಟೆಗಳ ಕಾಲ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ಕಲ್ಪಿಸುವ ಕಾರ್ಖಾನೆಗಳ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಈ ವಿಧೇಯಕ ಮಂಡಿಸಿ ದುಡಿಮೆ ಮತ್ತು ಗಳಿಕೆಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶವನ್ನು ಕಲ್ಪಿಸಿ ಅವಧಿ ಮೀರಿದ ಕೆಲಸಕ್ಕಾಗಿ ಮಹಿಳಾ ಕೆಲಸಗಾರರಿಗೆ ಅನುವು ಮಾಡಿಕೊಡಲು ಮತ್ತು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಂದ ಲಿಖಿತ ಒಪ್ಪಿಗೆಉನ್ನು ಪಡೆಯುವುದರೊಂದಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸುರಕ್ಷತೆ ಮತ್ತು ಆರೋಗ್ಯವನ್ನು ಭದ್ರಪಡಿಸಲು ಷರತ್ತುಗೊಳಪಟ್ಟು 24 ಗಂಟೆ ಕೆಲಸ ಮಾಡಲು ಮಹಿಳೆಯರನ್ನು ಸಶಕ್ತಗೊಳಿಸುವುದಕ್ಕಾಗಿ ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.
ಜತೆಗೆ ಇನ್ನಷ್ಟು ಆರ್ಥಿಕ ಚಟುವಟಿಕೆಗಳು, ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸಲು ಯಾವುದೇ ವಾರದಲ್ಲಿ ಗರಿಷ್ಠ 48 ಗಂಟೆಗೊಳಪಟ್ಟು ಯಾವುದೇ ದಿನದಲ್ಲಿ ವಿರಾಮ ಮಧ್ಯಂತರಗಳನ್ನೊಳಗೊಂಡಂತೆ ಪ್ರಸ್ತುತದಲ್ಲಿರುವ ಕೆಲಸದ ಗಂಟೆಗಳ ಅವಧಿಯನ್ನು 9 ಗಂಟೆಯಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಅವಕಾಶ ಕಲ್ಪಿಸುವುದಕ್ಕೆ ಹಾಗೂ ದೈನಂದಿನ ಗರಿಷ್ಠ ಕೆಲಸದ ಅವಧಿಯನ್ನು ಹೆಚ್ಚಿಸಲು ಕಾರ್ಖಾನೆಗಳ ಯಾವುದೇ ಗುಂಪು ಅಥವಾ ವರ್ಗ ವಿವರಣೆಗೆ ಕೆಲಸಗಾರನಿಗೆ ಒಟ್ಟು ಕೆಲಸದ ಗಂಟೆಗಳ ಅವಧಿಯನ್ನು ಮಧ್ಯಂತರವಿಲ್ಲದೆ 6 ಗಂಟೆಗಳ ವರೆಗೆ ವಿಸ್ತರಿಸಲು ರಾಜ್ಯಸರ್ಕಾರಕ್ಕೆ ಅವಕಾಶ ಕಲ್ಪಿಸುವುದಕ್ಕೆ ಯಾವುದೇ ವಾರದಲ್ಲಿನ ಅಥವಾ ಯಾವುದೇ ದಿನದಲ್ಲಿ ಕೆಲಸದ ಸಂದರ್ಭದಲ್ಲಿ ಸಾಮಾನ್ಯ ದರಕ್ಕಿಂತ ದುಪ್ಪಟ್ಟು ದರದಲ್ಲಿ ಮಜೂರಿಯನ್ನು ಕೆಲಸಗಾರನಿಗೆ ಪಾವತಿಸಬೇಕಾದ ಕೆಲಸದ ವೇಳೆಗಳನ್ನು ನಿಯಮಿಸಲು ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

8 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

10 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

10 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

10 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

11 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

11 hours ago