ಮಹಿಳೆ

ಮಹಿಳಾ ಕಾರ್ಮಿಕರ ಸುರಕ್ಷತೆಗೆ ಕಾನೂನು : ವಿಧಾನಸಭೆಯಲ್ಲಿ ಕಾರ್ಖಾನೆಗಳ ತಿದ್ದುಪಡಿಗೆ ವಿಧೇಯಕ ಮಂಡನೆ

ಬೆಂಗಳೂರು: ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಗೆ ಸೂಕ್ತ ಸುರಕ್ಷತೆಯೊಂದಿಗೆ 24 ಗಂಟೆಗಳ ಕಾಲ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ಕಲ್ಪಿಸುವ ಕಾರ್ಖಾನೆಗಳ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಈ ವಿಧೇಯಕ ಮಂಡಿಸಿ ದುಡಿಮೆ ಮತ್ತು ಗಳಿಕೆಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶವನ್ನು ಕಲ್ಪಿಸಿ ಅವಧಿ ಮೀರಿದ ಕೆಲಸಕ್ಕಾಗಿ ಮಹಿಳಾ ಕೆಲಸಗಾರರಿಗೆ ಅನುವು ಮಾಡಿಕೊಡಲು ಮತ್ತು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಂದ ಲಿಖಿತ ಒಪ್ಪಿಗೆಉನ್ನು ಪಡೆಯುವುದರೊಂದಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸುರಕ್ಷತೆ ಮತ್ತು ಆರೋಗ್ಯವನ್ನು ಭದ್ರಪಡಿಸಲು ಷರತ್ತುಗೊಳಪಟ್ಟು 24 ಗಂಟೆ ಕೆಲಸ ಮಾಡಲು ಮಹಿಳೆಯರನ್ನು ಸಶಕ್ತಗೊಳಿಸುವುದಕ್ಕಾಗಿ ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.
ಜತೆಗೆ ಇನ್ನಷ್ಟು ಆರ್ಥಿಕ ಚಟುವಟಿಕೆಗಳು, ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸಲು ಯಾವುದೇ ವಾರದಲ್ಲಿ ಗರಿಷ್ಠ 48 ಗಂಟೆಗೊಳಪಟ್ಟು ಯಾವುದೇ ದಿನದಲ್ಲಿ ವಿರಾಮ ಮಧ್ಯಂತರಗಳನ್ನೊಳಗೊಂಡಂತೆ ಪ್ರಸ್ತುತದಲ್ಲಿರುವ ಕೆಲಸದ ಗಂಟೆಗಳ ಅವಧಿಯನ್ನು 9 ಗಂಟೆಯಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಅವಕಾಶ ಕಲ್ಪಿಸುವುದಕ್ಕೆ ಹಾಗೂ ದೈನಂದಿನ ಗರಿಷ್ಠ ಕೆಲಸದ ಅವಧಿಯನ್ನು ಹೆಚ್ಚಿಸಲು ಕಾರ್ಖಾನೆಗಳ ಯಾವುದೇ ಗುಂಪು ಅಥವಾ ವರ್ಗ ವಿವರಣೆಗೆ ಕೆಲಸಗಾರನಿಗೆ ಒಟ್ಟು ಕೆಲಸದ ಗಂಟೆಗಳ ಅವಧಿಯನ್ನು ಮಧ್ಯಂತರವಿಲ್ಲದೆ 6 ಗಂಟೆಗಳ ವರೆಗೆ ವಿಸ್ತರಿಸಲು ರಾಜ್ಯಸರ್ಕಾರಕ್ಕೆ ಅವಕಾಶ ಕಲ್ಪಿಸುವುದಕ್ಕೆ ಯಾವುದೇ ವಾರದಲ್ಲಿನ ಅಥವಾ ಯಾವುದೇ ದಿನದಲ್ಲಿ ಕೆಲಸದ ಸಂದರ್ಭದಲ್ಲಿ ಸಾಮಾನ್ಯ ದರಕ್ಕಿಂತ ದುಪ್ಪಟ್ಟು ದರದಲ್ಲಿ ಮಜೂರಿಯನ್ನು ಕೆಲಸಗಾರನಿಗೆ ಪಾವತಿಸಬೇಕಾದ ಕೆಲಸದ ವೇಳೆಗಳನ್ನು ನಿಯಮಿಸಲು ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.

andolanait

Recent Posts

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ…

11 mins ago

ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟ ಸೇರಲ್ಲ: ಟಿವಿಕೆ ಸ್ಪಷ್ಟನೆ

ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…

24 mins ago

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…

56 mins ago

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

2 hours ago

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

5 hours ago

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…

5 hours ago