ಮಹಿಳೆ

ಮಹಿಳಾ ಕಾರ್ಮಿಕರ ಸುರಕ್ಷತೆಗೆ ಕಾನೂನು : ವಿಧಾನಸಭೆಯಲ್ಲಿ ಕಾರ್ಖಾನೆಗಳ ತಿದ್ದುಪಡಿಗೆ ವಿಧೇಯಕ ಮಂಡನೆ

ಬೆಂಗಳೂರು: ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಗೆ ಸೂಕ್ತ ಸುರಕ್ಷತೆಯೊಂದಿಗೆ 24 ಗಂಟೆಗಳ ಕಾಲ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ಕಲ್ಪಿಸುವ ಕಾರ್ಖಾನೆಗಳ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಈ ವಿಧೇಯಕ ಮಂಡಿಸಿ ದುಡಿಮೆ ಮತ್ತು ಗಳಿಕೆಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶವನ್ನು ಕಲ್ಪಿಸಿ ಅವಧಿ ಮೀರಿದ ಕೆಲಸಕ್ಕಾಗಿ ಮಹಿಳಾ ಕೆಲಸಗಾರರಿಗೆ ಅನುವು ಮಾಡಿಕೊಡಲು ಮತ್ತು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಂದ ಲಿಖಿತ ಒಪ್ಪಿಗೆಉನ್ನು ಪಡೆಯುವುದರೊಂದಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸುರಕ್ಷತೆ ಮತ್ತು ಆರೋಗ್ಯವನ್ನು ಭದ್ರಪಡಿಸಲು ಷರತ್ತುಗೊಳಪಟ್ಟು 24 ಗಂಟೆ ಕೆಲಸ ಮಾಡಲು ಮಹಿಳೆಯರನ್ನು ಸಶಕ್ತಗೊಳಿಸುವುದಕ್ಕಾಗಿ ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.
ಜತೆಗೆ ಇನ್ನಷ್ಟು ಆರ್ಥಿಕ ಚಟುವಟಿಕೆಗಳು, ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸಲು ಯಾವುದೇ ವಾರದಲ್ಲಿ ಗರಿಷ್ಠ 48 ಗಂಟೆಗೊಳಪಟ್ಟು ಯಾವುದೇ ದಿನದಲ್ಲಿ ವಿರಾಮ ಮಧ್ಯಂತರಗಳನ್ನೊಳಗೊಂಡಂತೆ ಪ್ರಸ್ತುತದಲ್ಲಿರುವ ಕೆಲಸದ ಗಂಟೆಗಳ ಅವಧಿಯನ್ನು 9 ಗಂಟೆಯಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಅವಕಾಶ ಕಲ್ಪಿಸುವುದಕ್ಕೆ ಹಾಗೂ ದೈನಂದಿನ ಗರಿಷ್ಠ ಕೆಲಸದ ಅವಧಿಯನ್ನು ಹೆಚ್ಚಿಸಲು ಕಾರ್ಖಾನೆಗಳ ಯಾವುದೇ ಗುಂಪು ಅಥವಾ ವರ್ಗ ವಿವರಣೆಗೆ ಕೆಲಸಗಾರನಿಗೆ ಒಟ್ಟು ಕೆಲಸದ ಗಂಟೆಗಳ ಅವಧಿಯನ್ನು ಮಧ್ಯಂತರವಿಲ್ಲದೆ 6 ಗಂಟೆಗಳ ವರೆಗೆ ವಿಸ್ತರಿಸಲು ರಾಜ್ಯಸರ್ಕಾರಕ್ಕೆ ಅವಕಾಶ ಕಲ್ಪಿಸುವುದಕ್ಕೆ ಯಾವುದೇ ವಾರದಲ್ಲಿನ ಅಥವಾ ಯಾವುದೇ ದಿನದಲ್ಲಿ ಕೆಲಸದ ಸಂದರ್ಭದಲ್ಲಿ ಸಾಮಾನ್ಯ ದರಕ್ಕಿಂತ ದುಪ್ಪಟ್ಟು ದರದಲ್ಲಿ ಮಜೂರಿಯನ್ನು ಕೆಲಸಗಾರನಿಗೆ ಪಾವತಿಸಬೇಕಾದ ಕೆಲಸದ ವೇಳೆಗಳನ್ನು ನಿಯಮಿಸಲು ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

4 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

4 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

9 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago