ಮಹಿಳೆ

ಮಹಿಳಾ ಕಾರ್ಮಿಕರ ಸುರಕ್ಷತೆಗೆ ಕಾನೂನು : ವಿಧಾನಸಭೆಯಲ್ಲಿ ಕಾರ್ಖಾನೆಗಳ ತಿದ್ದುಪಡಿಗೆ ವಿಧೇಯಕ ಮಂಡನೆ

ಬೆಂಗಳೂರು: ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಗೆ ಸೂಕ್ತ ಸುರಕ್ಷತೆಯೊಂದಿಗೆ 24 ಗಂಟೆಗಳ ಕಾಲ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ಕಲ್ಪಿಸುವ ಕಾರ್ಖಾನೆಗಳ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಈ ವಿಧೇಯಕ ಮಂಡಿಸಿ ದುಡಿಮೆ ಮತ್ತು ಗಳಿಕೆಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶವನ್ನು ಕಲ್ಪಿಸಿ ಅವಧಿ ಮೀರಿದ ಕೆಲಸಕ್ಕಾಗಿ ಮಹಿಳಾ ಕೆಲಸಗಾರರಿಗೆ ಅನುವು ಮಾಡಿಕೊಡಲು ಮತ್ತು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಂದ ಲಿಖಿತ ಒಪ್ಪಿಗೆಉನ್ನು ಪಡೆಯುವುದರೊಂದಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸುರಕ್ಷತೆ ಮತ್ತು ಆರೋಗ್ಯವನ್ನು ಭದ್ರಪಡಿಸಲು ಷರತ್ತುಗೊಳಪಟ್ಟು 24 ಗಂಟೆ ಕೆಲಸ ಮಾಡಲು ಮಹಿಳೆಯರನ್ನು ಸಶಕ್ತಗೊಳಿಸುವುದಕ್ಕಾಗಿ ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.
ಜತೆಗೆ ಇನ್ನಷ್ಟು ಆರ್ಥಿಕ ಚಟುವಟಿಕೆಗಳು, ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸಲು ಯಾವುದೇ ವಾರದಲ್ಲಿ ಗರಿಷ್ಠ 48 ಗಂಟೆಗೊಳಪಟ್ಟು ಯಾವುದೇ ದಿನದಲ್ಲಿ ವಿರಾಮ ಮಧ್ಯಂತರಗಳನ್ನೊಳಗೊಂಡಂತೆ ಪ್ರಸ್ತುತದಲ್ಲಿರುವ ಕೆಲಸದ ಗಂಟೆಗಳ ಅವಧಿಯನ್ನು 9 ಗಂಟೆಯಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಅವಕಾಶ ಕಲ್ಪಿಸುವುದಕ್ಕೆ ಹಾಗೂ ದೈನಂದಿನ ಗರಿಷ್ಠ ಕೆಲಸದ ಅವಧಿಯನ್ನು ಹೆಚ್ಚಿಸಲು ಕಾರ್ಖಾನೆಗಳ ಯಾವುದೇ ಗುಂಪು ಅಥವಾ ವರ್ಗ ವಿವರಣೆಗೆ ಕೆಲಸಗಾರನಿಗೆ ಒಟ್ಟು ಕೆಲಸದ ಗಂಟೆಗಳ ಅವಧಿಯನ್ನು ಮಧ್ಯಂತರವಿಲ್ಲದೆ 6 ಗಂಟೆಗಳ ವರೆಗೆ ವಿಸ್ತರಿಸಲು ರಾಜ್ಯಸರ್ಕಾರಕ್ಕೆ ಅವಕಾಶ ಕಲ್ಪಿಸುವುದಕ್ಕೆ ಯಾವುದೇ ವಾರದಲ್ಲಿನ ಅಥವಾ ಯಾವುದೇ ದಿನದಲ್ಲಿ ಕೆಲಸದ ಸಂದರ್ಭದಲ್ಲಿ ಸಾಮಾನ್ಯ ದರಕ್ಕಿಂತ ದುಪ್ಪಟ್ಟು ದರದಲ್ಲಿ ಮಜೂರಿಯನ್ನು ಕೆಲಸಗಾರನಿಗೆ ಪಾವತಿಸಬೇಕಾದ ಕೆಲಸದ ವೇಳೆಗಳನ್ನು ನಿಯಮಿಸಲು ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

4 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago