ಬೆಂಗಳೂರು: ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಗೆ ಸೂಕ್ತ ಸುರಕ್ಷತೆಯೊಂದಿಗೆ 24 ಗಂಟೆಗಳ ಕಾಲ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ಕಲ್ಪಿಸುವ ಕಾರ್ಖಾನೆಗಳ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಈ ವಿಧೇಯಕ ಮಂಡಿಸಿ ದುಡಿಮೆ ಮತ್ತು ಗಳಿಕೆಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶವನ್ನು ಕಲ್ಪಿಸಿ ಅವಧಿ ಮೀರಿದ ಕೆಲಸಕ್ಕಾಗಿ ಮಹಿಳಾ ಕೆಲಸಗಾರರಿಗೆ ಅನುವು ಮಾಡಿಕೊಡಲು ಮತ್ತು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಂದ ಲಿಖಿತ ಒಪ್ಪಿಗೆಉನ್ನು ಪಡೆಯುವುದರೊಂದಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸುರಕ್ಷತೆ ಮತ್ತು ಆರೋಗ್ಯವನ್ನು ಭದ್ರಪಡಿಸಲು ಷರತ್ತುಗೊಳಪಟ್ಟು 24 ಗಂಟೆ ಕೆಲಸ ಮಾಡಲು ಮಹಿಳೆಯರನ್ನು ಸಶಕ್ತಗೊಳಿಸುವುದಕ್ಕಾಗಿ ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.
ಜತೆಗೆ ಇನ್ನಷ್ಟು ಆರ್ಥಿಕ ಚಟುವಟಿಕೆಗಳು, ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸಲು ಯಾವುದೇ ವಾರದಲ್ಲಿ ಗರಿಷ್ಠ 48 ಗಂಟೆಗೊಳಪಟ್ಟು ಯಾವುದೇ ದಿನದಲ್ಲಿ ವಿರಾಮ ಮಧ್ಯಂತರಗಳನ್ನೊಳಗೊಂಡಂತೆ ಪ್ರಸ್ತುತದಲ್ಲಿರುವ ಕೆಲಸದ ಗಂಟೆಗಳ ಅವಧಿಯನ್ನು 9 ಗಂಟೆಯಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಅವಕಾಶ ಕಲ್ಪಿಸುವುದಕ್ಕೆ ಹಾಗೂ ದೈನಂದಿನ ಗರಿಷ್ಠ ಕೆಲಸದ ಅವಧಿಯನ್ನು ಹೆಚ್ಚಿಸಲು ಕಾರ್ಖಾನೆಗಳ ಯಾವುದೇ ಗುಂಪು ಅಥವಾ ವರ್ಗ ವಿವರಣೆಗೆ ಕೆಲಸಗಾರನಿಗೆ ಒಟ್ಟು ಕೆಲಸದ ಗಂಟೆಗಳ ಅವಧಿಯನ್ನು ಮಧ್ಯಂತರವಿಲ್ಲದೆ 6 ಗಂಟೆಗಳ ವರೆಗೆ ವಿಸ್ತರಿಸಲು ರಾಜ್ಯಸರ್ಕಾರಕ್ಕೆ ಅವಕಾಶ ಕಲ್ಪಿಸುವುದಕ್ಕೆ ಯಾವುದೇ ವಾರದಲ್ಲಿನ ಅಥವಾ ಯಾವುದೇ ದಿನದಲ್ಲಿ ಕೆಲಸದ ಸಂದರ್ಭದಲ್ಲಿ ಸಾಮಾನ್ಯ ದರಕ್ಕಿಂತ ದುಪ್ಪಟ್ಟು ದರದಲ್ಲಿ ಮಜೂರಿಯನ್ನು ಕೆಲಸಗಾರನಿಗೆ ಪಾವತಿಸಬೇಕಾದ ಕೆಲಸದ ವೇಳೆಗಳನ್ನು ನಿಯಮಿಸಲು ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…