ಮಹಿಳೆ

ಜ.16ರಂದು ʼನಾ ನಾಯಕಿʼ ಸಮಾವೇಶ : ಪ್ರಿಯಾಂಕಾ ಗಾಂಧಿ ಉದ್ಘಾಟನೆ

ಬೆಂಗಳೂರು: ‘ಇದೇ 16ರಂದು ಅರಮನೆ ಮೈದಾನದಲ್ಲಿ ಪಕ್ಷದಿಂದ ‘ನಾ ನಾಯಕಿ’ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮವನ್ನು ಪ್ರಿಯಾಂಕಾ ಗಾಂಧಿ ಉದ್ಘಾಟಿಸಲಿದ್ದಾರೆ’ ಎಂದು ಕಾಂಗ್ರೆಸ್ ನಾಯಕಿ ಉಮಾಶ್ರೀ ಹೇಳಿದರು.

ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ಶಾಸಕಿ ಸೌಮ್ಯಾರೆಡ್ಡಿ, ರಾಣಿ ಸತೀಶ್ ಜೊತೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷ  ಮಹಿಳೆಯರು ಭಾಗವಹಿಸಲಿದ್ದಾರೆ’ ಎಂದರು.

‘ಮುಂದಿನ ವಿಧಾನಸಭಾ ಚುನಾ ವಣೆಯಲ್ಲಿ ಟಿಕೆಟ್‌ ಬಯಸಿ 109 ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಮಹಿಳೆಯರಿಗೆ ಹೆಚ್ಚು ಅವಕಾಶ ನೀಡುವಂತೆ ಪ್ರಿಯಾಂಕಾ ಗಾಂಧಿಗೆ ನಾವೆಲ್ಲರೂ ಒಕ್ಕೊರಲಿನಿಂದ ಒತ್ತಾಯಿಸುತ್ತೇವೆ’ ಎಂದು ಹೇಳಿದರು.

ಪುಷ್ಪಾ ಅಮರನಾಥ್ ಮಾತನಾಡಿ, ‘ಮಹಿಳೆಯರಿಗೆ ರಾಜಕೀಯ ಮೀಸ ಲಾತಿ ಜಾರಿಗೆ ತರಬೇಕು. 74 ಕ್ಷೇತ್ರಗಳಲ್ಲಿ ಟಿಕೆಟ್ ಬಯಸಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. 30 ಕ್ಷೇತ್ರಗಳಲ್ಲಿ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದೇವೆ’ ಎಂದರು.

 

andolanait

Share
Published by
andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

4 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago