ಮಹಿಳೆ

ನಿರ್ಮಲಾ ಸೀತಾರಾಮನ್ ಆರೋಗ್ಯದಲ್ಲಿ ಚೇತರಿಕೆ :ನಾಳೆ ಏಮ್ಸ್​ನಿಂದ ಡಿಸ್ಚಾರ್ಜ್ ಸಾಧ್ಯತೆ

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರು ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆ (AIIMS) ಮೂಲಗಳು ತಿಳಿಸಿವೆ. ವೈರಲ್ ಜ್ವರದಿಂದ ಬಳಲುತ್ತಿದ್ದ ನಿರ್ಮಲಾ ಸೀತಾರಾಮನ್ ಅವರನ್ನು ಸೋಮವಾರ ಏಮ್ಸ್​​ಗೆ ದಾಖಲಿಸಲಾಗಿತ್ತು. ಸಚಿವರ ಆರೋಗ್ಯ ಚೇತರಿಸಿದೆ. ಹೀಗಾಗಿ ಬುಧವಾರ ವೈದ್ಯರು ಅವರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ. 63 ವರ್ಷದ ನಿರ್ಮಲಾ ಸೀತಾರಾಮನ್ ಅವರನ್ನು ಏಮ್ಸ್​ ಆಸ್ಪತ್ರೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ.

ಸೋಮವಾರ ಬೆಳಿಗ್ಗೆಯಿಂದಲೇ ನಿರ್ಮಲಾ ಸೀತಾರಾಮನ್ ಅಸ್ವಸ್ಥಗೊಂಡಿದ್ದರು. ಬಳಿಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವರನ್ನು ಏಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಏಮ್ಸ್ ಬಹಿರಂಗಪಡಿಸಿರಲಿಲ್ಲ. ಬಳಿಕ, ಹಣಕಾಸು ಸಚಿವರ ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾಗಿಲ್ಲ. ಅವರು ಆರೋಗ್ಯವಾಗಿದ್ದಾರೆ ಎಂದು ಏಮ್ಸ್​ ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದರು.

 

andolanait

Share
Published by
andolanait

Recent Posts

ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ: ಕಬಿನಿ ಜಲಾಶಯದ ಒಳಹರಿವು ಹೆಚ್ಚಳ

ಎಚ್‌.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ…

7 mins ago

ಇಂದಿನಿಂದ 6 ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ

ನವದೆಹಲಿ: ಇಂದಿನಿಂದ ಆರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ…

16 mins ago

ಅಷ್ಟಾಂಗ ಯೋಗದ ರಾಜಧಾನಿ ಮೈಸೂರು

ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…

2 hours ago

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಬಿಎಸ್‌ವೈಗೆ ಲಿಂಗಾಯತ ಶಕ್ತಿಯದ್ದೇ ಚಿಂತೆ

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…

4 hours ago

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

7 hours ago