ಚಿತ್ರದುರ್ಗ ಜಿಲ್ಲೆ ಗೋಪನಹಳ್ಳಿ ಗ್ರಾಮದಲ್ಲಿ ದಾರುಣ ಘಟನೆ
ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಮಹಿಳೆಯರು ವಿಷ ಕುಡಿದು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತರನ್ನು ಗೋಪನಹಳ್ಳಿ ಗ್ರಾಮದ ದಲಿತ ಕಾಲೋನಿಯ ಮಂಗೇರ ತಿಪ್ಪಜ್ಜಿ (೭೦), ಮಾರಕ್ಕ (೪೫) ಮತ್ತು ದ್ಯಾಮಕ್ಕ(೪೩) ಎಂದು ಗುರುತಿಸಲಾಗಿದೆ.
ಗುರುವಾರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬೆಳಿಗ್ಗೆ ಆದರೂ ಕೂಡ ಬಾಗಿಲು ತೆರೆಯದೆ ಇದ್ದಾಗ ಅಕ್ಕ ಪಕ್ಕದವರು ಕದ ತಟ್ಟಿದ್ದಾರೆ. ಕಿಟಕಿಯಿಂದ ನೀರು ಎರಚಿದರೂ ಎಚ್ಚರಗೊಳ್ಳದ ಕಾರಣ ರಾತ್ರಿ ವೇಳೆಗೆ ಚಳ್ಳಕೆರೆ ಪೋಲಿಸ್ ಠಾಣೆಗೆ ವಿಷಯ ತಿಳಿಸಿದ್ದಾರೆ.
ವಿಷಯ ತಿಳಿದ ಚಳ್ಳಕೆರೆ ಪೋಲಿಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ, ಬಾಗಿಲು ಹೊಡೆದು ಒಳಗಡೆ ನೋಡಿದಾಗ ಮೂವರು ನೀರಿನಲ್ಲಿ ವಿಷ ಬೆರೆಸಿ ಕುಡಿದಿರುವುದು ತಿಳಿದು ಬಂದಿದೆ. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…