ಮಹಿಳೆ

ಶಾಸಕ ಬಾನೋತ್ ಶಂಕರ್ ನಾಯ್ಕ್ ವಿರುದ್ಧ ಹೇಳಿಕೆ : ವೈ.ಎಸ್.ಶರ್ಮಿಳಾ ಅರೆಸ್ಟ್‌

ಹೈದರಾಬಾದ್: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ಶಾಸಕ ಬಾನೋತ್ ಶಂಕರ್ ನಾಯ್ಕ್ ವಿರುದ್ಧ ಅನುಚಿತ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ಮುಖ್ಯಸ್ಥೆ ವೈ.ಎಸ್.ಶರ್ಮಿಳಾ ಅವರನ್ನು ಮಹಬುಬಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಶರ್ಮಿಳಾ ಅವರ ಪಾದಯಾತ್ರೆ ತಡೆದು ವಶಕ್ಕೆ ಪಡೆಯಲಾಗಿದ್ದು, ಅವರನ್ನು ಹೈದರಾಬಾದ್‌ಗೆ ಸ್ಥಳಾಂತರ ಮಾಡಲಾಗಿದೆ ಎಂದು ವರದಿ ಹೇಳಿದೆ. ಶಾಸಕ ಶಂಕರ್‌ ನಾಯ್ಕ್‌ ಅವರು ಭೂಕಬಳಿಕೆ ಹಾಗೂ ದರೋಡೆಯಲ್ಲಿ ಭಾಗಿಯಾಗಿದ್ದಾರೆ ಎಂದು ಶರ್ಮಿಳಾ ಈ ಹಿಂದೆ ಶಾಸಕರ ವಿರುದ್ಧ ಆರೋಪ ಮಾಡಿದಲ್ಲದೇ ನಿಂದಿಸಿದ್ದರು. ಸಾರ್ವಜನಿಕ ಸಭೆಯೊಂದರಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಿದ ಬಿಆರ್‌ಎಸ್‌ ಮಂಡಲ ಕಾರ್ಯಾಧ್ಯಕ್ಷ ಲುನಾವತ್‌ ಅಶೋಕ್‌ ಅವರು ಶರ್ಮಿಳಾ ವಿರುದ್ಧ ದೂರಿದ್ದಾರೆ.
ಪಾದಯಾತ್ರೆ ಸಂದರ್ಭದಲ್ಲಿ ಸಾರ್ವಜನಿಕರ ಶಾಂತಿ ಕದಡುವ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಲಾಗಿದ್ದು, ಸ್ಥಳೀಯ ಶಾಸಕರನ್ನು ವೈಯಕ್ತಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ದೂರುಗಳು ಬಂದಿದ್ದವು ಎಂದು ಪೊಲೀಸ್‌ ಅಧಿಕಾರಿ ಶರತ್ ಚಂದ್ರ ಪವಾರ್ ಹೇಳಿದ್ದಾರೆ.

andolanait

Share
Published by
andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago