ಮಹಿಳೆ

ಸುಪ್ರೀಂನಿಂದ ಮಹಿಳಾ ನ್ಯಾಯಪೀಠ ರಚನೆ

ವೈವಾಹಿಕ ವ್ಯಾಜ್ಯಗಳು, ಜಾಮೀನು ವಿಷುಯಗಳ ವಿಚಾರಣೆ

ಹೊಸದಿಲ್ಲಿ: ಸರ್ವೋಚ್ಚ ನ್ಯಾಯಾಲಯ ವೈವಾಹಿಕ ವ್ಯಾಜ್ಯಗಳು ಮತ್ತು ಜಾಮೀನು ವಿಷಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಚಾರಣೆ ನಡೆಸಲು ನ್ಯಾಯಮೂರ್ತಿಗಳಾದ ಹಿವಾ ಕೊಹ್ಲಿ ಮತ್ತು ಬೇಲಾ ಎಂ.ತ್ರಿವೇದಿ ಅವರನ್ನೊಳಗೊಂಡ ಮಹಿಳಾ ಪೀಠವನ್ನು ರಚಿಸಿದೆ.
ಪ್ರತಿ ಗುರುವಾರ ಇಂತಹ ೧೦ ಪ್ರಕರಣಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಈ ಹಿಂದೆ ಸರ್ವೋಚ್ಚ ನ್ಯಾಯಾಲಯ ಹೇಳಿತ್ತು. ಅದಕ್ಕಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಕೇವಲ ಮಹಿಳೆಯರನ್ನೇ ಹೊಂದಿರುವ ಈ ಪೀಠವನ್ನು ರಚಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಇತಿಹಾಸದಲ್ಲಿ ಪೂರ್ತಿ ಮಹಿಳಾ ನ್ಯಾಯಧೀಶರಿರುವ ಪೀಠ ರಚನೆಯಾಗುತ್ತಿರುವುದು ಇದು ಮೂರನೇ ಬಾರಿ. ಈ ದ್ವಿಸದಸ್ಯ ಪೀಠವು ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದ ಕೊಠಡಿ ಸಂಖ್ಯೆ ೧೧ ರಲ್ಲಿ ಕುಳಿತುಕೊಳ್ಳಲಿದೆ. ಜ್ಞಾನ್ ಸುಧಾ ಮಿಶ್ರಾ ಮತ್ತು ರಂಜನಾ ಪ್ರಕಾಶ್ ದೇಸಾಯಿ ಅವರಿದ್ದ ಮೊದಲ ಸರ್ವ ಮಹಿಳಾ ಪೀಠವನ್ನು ೨೦೧೩ ರಲ್ಲಿ ಸ್ಥಾಪಿಸಿತ್ತು. ೨೦೧೮ ರಲ್ಲಿ ನ್ಯಾಯಮೂರ್ತಿಗಳಾದ ಆರ್ ಭಾನುಮತಿ ಮತ್ತು ಇಂದಿರಾ ಬ್ಯಾನರ್ಜಿ ಅವರ ದ್ವಿಸದಸ್ಯ ಪೀಠವನ್ನು ರಚಿಸಿತ್ತು.
ಪ್ರಸ್ತುತ ಈ ಪೀಠವು ವೈವಾಹಿಕ ವಿವಾದಗಳನ್ನು ಒಳಗೊಂಡ ೧೦ ವರ್ಗಾವಣೆ ಅರ್ಜಿಗಳು ಮತ್ತು ೧೦ ಜಾಮೀನು ಅರ್ಜಿಗಳ ವಿಚಾರಣೆ ನಡೆಸಲಿದೆ. ಈ ಪೀಠದಲ್ಲಿನ ವಿಚಾರಣೆಗಾಗಿ ಒಟ್ಟು ೩೨ ವಿಷಯಗಳನ್ನು ಪಟ್ಟಿಮಾಡಲಾಗಿದೆ. ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಕೊಹ್ಲಿ, ಬಿ.ವಿ.ನಾಗರತ್ನ ಮತ್ತು ತ್ರಿವೇದಿ ಸೇರಿದಂತೆ ಮೂವರು ಮಹಿಳಾ ನ್ಯಾಯಾಧೀಶರಿದ್ದಾರೆ.

andolanait

Recent Posts

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

49 mins ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

55 mins ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

1 hour ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

1 hour ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

1 hour ago

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

2 hours ago