ಮಹಿಳೆ

ಸುಪ್ರೀಂನಿಂದ ಮಹಿಳಾ ನ್ಯಾಯಪೀಠ ರಚನೆ

ವೈವಾಹಿಕ ವ್ಯಾಜ್ಯಗಳು, ಜಾಮೀನು ವಿಷುಯಗಳ ವಿಚಾರಣೆ

ಹೊಸದಿಲ್ಲಿ: ಸರ್ವೋಚ್ಚ ನ್ಯಾಯಾಲಯ ವೈವಾಹಿಕ ವ್ಯಾಜ್ಯಗಳು ಮತ್ತು ಜಾಮೀನು ವಿಷಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಚಾರಣೆ ನಡೆಸಲು ನ್ಯಾಯಮೂರ್ತಿಗಳಾದ ಹಿವಾ ಕೊಹ್ಲಿ ಮತ್ತು ಬೇಲಾ ಎಂ.ತ್ರಿವೇದಿ ಅವರನ್ನೊಳಗೊಂಡ ಮಹಿಳಾ ಪೀಠವನ್ನು ರಚಿಸಿದೆ.
ಪ್ರತಿ ಗುರುವಾರ ಇಂತಹ ೧೦ ಪ್ರಕರಣಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಈ ಹಿಂದೆ ಸರ್ವೋಚ್ಚ ನ್ಯಾಯಾಲಯ ಹೇಳಿತ್ತು. ಅದಕ್ಕಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಕೇವಲ ಮಹಿಳೆಯರನ್ನೇ ಹೊಂದಿರುವ ಈ ಪೀಠವನ್ನು ರಚಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಇತಿಹಾಸದಲ್ಲಿ ಪೂರ್ತಿ ಮಹಿಳಾ ನ್ಯಾಯಧೀಶರಿರುವ ಪೀಠ ರಚನೆಯಾಗುತ್ತಿರುವುದು ಇದು ಮೂರನೇ ಬಾರಿ. ಈ ದ್ವಿಸದಸ್ಯ ಪೀಠವು ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದ ಕೊಠಡಿ ಸಂಖ್ಯೆ ೧೧ ರಲ್ಲಿ ಕುಳಿತುಕೊಳ್ಳಲಿದೆ. ಜ್ಞಾನ್ ಸುಧಾ ಮಿಶ್ರಾ ಮತ್ತು ರಂಜನಾ ಪ್ರಕಾಶ್ ದೇಸಾಯಿ ಅವರಿದ್ದ ಮೊದಲ ಸರ್ವ ಮಹಿಳಾ ಪೀಠವನ್ನು ೨೦೧೩ ರಲ್ಲಿ ಸ್ಥಾಪಿಸಿತ್ತು. ೨೦೧೮ ರಲ್ಲಿ ನ್ಯಾಯಮೂರ್ತಿಗಳಾದ ಆರ್ ಭಾನುಮತಿ ಮತ್ತು ಇಂದಿರಾ ಬ್ಯಾನರ್ಜಿ ಅವರ ದ್ವಿಸದಸ್ಯ ಪೀಠವನ್ನು ರಚಿಸಿತ್ತು.
ಪ್ರಸ್ತುತ ಈ ಪೀಠವು ವೈವಾಹಿಕ ವಿವಾದಗಳನ್ನು ಒಳಗೊಂಡ ೧೦ ವರ್ಗಾವಣೆ ಅರ್ಜಿಗಳು ಮತ್ತು ೧೦ ಜಾಮೀನು ಅರ್ಜಿಗಳ ವಿಚಾರಣೆ ನಡೆಸಲಿದೆ. ಈ ಪೀಠದಲ್ಲಿನ ವಿಚಾರಣೆಗಾಗಿ ಒಟ್ಟು ೩೨ ವಿಷಯಗಳನ್ನು ಪಟ್ಟಿಮಾಡಲಾಗಿದೆ. ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಕೊಹ್ಲಿ, ಬಿ.ವಿ.ನಾಗರತ್ನ ಮತ್ತು ತ್ರಿವೇದಿ ಸೇರಿದಂತೆ ಮೂವರು ಮಹಿಳಾ ನ್ಯಾಯಾಧೀಶರಿದ್ದಾರೆ.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

2 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

3 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

16 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

16 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

17 hours ago